ಎಂಎಸ್ ಧೋನಿ 
ಕ್ರಿಕೆಟ್

ಅಂಪೈರ್ ತಪ್ಪು ತೀರ್ಪಿನಿಂದ ಧೋನಿ ಔಟಾದ್ರು, ಡಿಆರ್‌ಎಸ್‌ 'ಕಿಂಗ್'ಗೆ ಸಿಗಲಿಲ್ಲ ಡಿಆರ್‌ಎಸ್‌ ಅವಕಾಶ!

ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿದ್ದರೂ ಈಗ ಧೋನಿ ಔಟ್ ಎಂದು ನೀಡಿದ ತೀರ್ಪಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

ಸಿಡ್ನಿ: ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿದ್ದರೂ ಈಗ ಧೋನಿ ಔಟ್ ಎಂದು ನೀಡಿದ ತೀರ್ಪಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. 
ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಎಂಎಸ್ ಧೋನಿ 51 ರನ್ ಗಳಿಸಿದ್ದಾಗ ಬೆಹೆಂಡ್ರೋರ್ಫ್ ಎಸೆತದಲ್ಲಿ ಎಲ್ಬಿಯಾದರು. ಕೂಡಲೇ ಬೌಲರ್ ಎಲ್ಬಿ ಔಟ್ ಗೆ ಮನವಿ ಸಲ್ಲಿಸಿದರು. ಆಗ ಮೈದಾನದಲ್ಲಿದ್ದ ಅಂಪೈರ್ ಔಟ್ ಎಂದು ತೀರ್ಪು ನೀಡಿದರು. ಆದರೆ ಅದಾಗಲೇ ಅಂಬಟ್ಟಿ ರಾಯುಡು ಡಿಆರ್‌ಎಸ್‌ ತೆಗೆದುಕೊಂಡಿದ್ದರಿಂದ ಧೋನಿಗೆ ಡಿಆರ್‌ಎಸ್‌ ತೆಗೆದುಕೊಳ್ಳುವ ಅವಕಾಶವಿರಲಿಲ್ಲ. ಹೀಗಾಗಿ ಧೋನಿ ಪೆಲಿವಿಯನ್ ಕಡೆಗೆ ಹೆಜ್ಜೆ ಹಾಕಿದರು. ಆದರೆ ವಿಡಿಯೋ ರಿಪ್ಲೇಯಲ್ಲಿ ನಾಟೌಟ್ ಆಗಿರುವುದು ಸ್ಪಷ್ಟವಾಗಿತ್ತು. ಆದರೆ ಸಮಯ ಮೀರಿತ್ತು.
ಇನ್ನು ಧೋನಿ ಔಟ್ ಕುರಿತಂತೆ ಧೋನಿ ಔಟ್ ಆಗದೇ ಇದ್ದರೆ ಅವರು ತಂಡವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದರು. ಔಟ್ ನೀಡಿದ ಪರಿಣಾಮ ತಂಡಕ್ಕೆ ಭಾರೀ ಹಿನ್ನಡೆ ಆಯಿತು ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ಧೋನಿ ನಿಧಾನಗತಿಯ ಆಟದಿಂದಲೇ ಟೀಂ ಇಂಡಿಯಾಗೆ ಸೋಲಾಗಿದೆ ಎಂದು ವಾದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT