ಸಂಗ್ರಹ ಚಿತ್ರ 
ಕ್ರಿಕೆಟ್

ಅಸಭ್ಯ ಹೇಳಿಕೆ ವಿವಾದ; ಆಸಿಸ್ ಪ್ರವಾಸವಷ್ಟೇ ಅಲ್ಲ, ಏಕದಿನ ವಿಶ್ವಕಪ್ ನಿಂದಲೂ ಪಾಂಡ್ಯಾ, ರಾಹುಲ್ ಕಿಕ್ ಔಟ್?

ಹಾರ್ದಿಕ್ ಪಾಂಡ್ಯಾ, ಕೆಎಲ್ ರಾಹುಲ್ ಕೇವಲ ಹಾಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಮಾತ್ರವಲ್ಲ ಮುಂಬರುವ ಬಹು ನಿರೀಕ್ಷಿತ ಏಕದಿನ ಕ್ರಿಕೆಟ್ ವಿಶ್ವಕಪ್ ನಿಂದಲೂ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನವದೆಹಲಿ: ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಅಸಭ್ಯ ಹೇಳಿಕೆ ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿರುವ ಹಾರ್ದಿಕ್ ಪಾಂಡ್ಯಾ, ಕೆಎಲ್ ರಾಹುಲ್ ಕೇವಲ ಹಾಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಮಾತ್ರವಲ್ಲ ಮುಂಬರುವ ಬಹು ನಿರೀಕ್ಷಿತ ಏಕದಿನ ಕ್ರಿಕೆಟ್ ವಿಶ್ವಕಪ್ ನಿಂದಲೂ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂತಹುದೊಂದು ವಾದಕ್ಕೆ ಬಿಸಿಸಿಐನ ಆಡಳಿತ ಮಂಡಳಿ ಸದಸ್ಯರಾದ ಡಯಾನಾ ಎಡುಲ್ಜಿ ಅವರ ಹೇಳಿಕೆ ಕಾರಣವಾಗಿದ್ದು, ವಿವಾದ ಸಂಬಂಧ ಹಾರ್ದಿಕ್ ಪಾಂಡ್ಯ ಕ್ಷಮೆ ಯಾಚಿಸಿದ್ದರೂ ಅದಷ್ಟೇ ಸರಿ ಹೋಗುವುದಿಲ್ಲ ಎಂದು ಹೇಳುವ ಮೂಲಕ ಡಯಾನಾ ಎಡುಲ್ಜಿ ಅಚ್ಚರಿ ಮೂಡಿಸಿದ್ದಾರೆ. 
ಪ್ರಸ್ತುತ ಪಾಂಡ್ಯಾ, ರಾಹುಲ್ ಪ್ರಕರಣ ಬಿಸಿಸಿಐ ಆಡಳಿತ ಮಂಡಳಿಯ 8 ಸದಸ್ಯರ ಶಿಸ್ತು ಸಮಿತಿ ಮುಂದಿದ್ದು, ಈ ಸಮಿತಿ ಮುಖ್ಯಸ್ಥರಾಗಿರುವ ಡಯಾನಾ ಎಡುಲ್ಜಿ ಅವರು ವಿಚಾರಣೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆಟಗಾರರಿಗೆ ಬಿಸಿಸಿಐ ನೋಟಿಸ್ ನೀಡಿದ್ದು, ಈ ಪೈಕಿ ಪಾಂಡ್ಯಾ ಅದಕ್ಕೆ ಪ್ರತಿಕ್ರಿಯೆ ನೀಡಿ ಕ್ಷಮೆ ಕೂಡ ಕೇಳಿದ್ದಾರೆ. ಆದರೆ ಕೆಎಲ್ ರಾಹುಲ್ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕಿದ್ದು, ಅವರ ಪ್ರತಿಕ್ರಿಯೆ ಬಂದ ಬಳಿಕ ಬಿಸಿಸಿಐ ಶಿಸ್ತು ಸಮಿತಿ ತನ್ನ ಅಂತಿಮ ನಿರ್ಧಾರ ಪ್ರಕಟಿಸಲಿದೆ.
ಒಂದು ವೇಳೆ ಬಿಸಿಸಿಐನ ಶಿಸ್ತು ಸಮಿತಿ ಪಾಂಡ್ಯಾ ಮತ್ತು ರಾಹುಲ್ ವಿರುದ್ಧದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈ ಇಬ್ಬರೂ ಆಟಗಾರರ ವಿರುದ್ಧ ತಿಂಗಳುಗಳ ಕಾಲ ನಿಷೇಧ ಹೇರಿದರೆ ಆಗ ಖಂಡಿತಾ ಪಾಂಡ್ಯಾ ಹಾಗೂ ರಾಹುಲ್ ವಿಶ್ವಕಪ್ ಟೂರ್ನಿಯಿಂದ ದೂರ ಉಳಿಯಬೇಕಾಗುತ್ತದೆ. ಇದೇ ಮೇ ತಿಂಗಳ ಅಂತ್ಯದಲ್ಲಿ ವಿಶ್ವಕಪ್ ಆರಂಭವಾಗಲಿದ್ದು, ಇದಕ್ಕಾಗಿ ಕಠಿಣ ತಾಲೀಮು ನಡೆಸಿರುವ ಟೀಂ ಇಂಡಿಯಾ ಟೂರ್ನಿಗೆ ಸರ್ವಸನ್ನದ್ಧವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT