ಏಕದಿನ ಕ್ರಿಕೆಟ್ ಗೆ ಸಿರಾಜ್ ಪದಾರ್ಪಣೆ 
ಕ್ರಿಕೆಟ್

ಚೊಚ್ಚಲ ಪಂದ್ಯದಲ್ಲೇ ಹೀನಾಯ ಪ್ರದರ್ಶನ, ದಾಖಲೆ ಬರೆದ ಮೊಹಮ್ಮದ್ ಸಿರಾಜ್..!

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಭಾರತದ ಮಹಮದ್ ಸಿರಾಜ್ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಸರಣಿ ದಾಖಲೆಗಳ ನಿರ್ಮಾಣ ಮಾಡಿದ್ದರೆ, ಅದೇ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಭಾರತದ ಮಹಮದ್ ಸಿರಾಜ್ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.
ಟೀಂ ಇಂಡಿಯಾ ಪರ ಚೊಚ್ಚಲ ಪಂದ್ಯವಾಡಿರುವ ಸಿರಾಜ್​ 10 ಓವರ್​​ ಬೌಲಿಂಗ್ ಮಾಡಿದ್ದರು. ಆದರೆ ಯಾವುದೇ ವಿಕೆಟ್​ ಪಡೆಯಲು ಯಶಸ್ವಿಯಾಗಿರಲಿಲ್ಲ. ಅಲ್ಲದೆ ಬರೋಬ್ಬರಿ 76 ರನ್ ​ಗಳನ್ನುನೀಡಿ ದುಬಾರಿ ಬೌಲರ್ ಎನಿಸಿಕೊಂಡರು. ಈ ಮೂಲಕ ಪದಾರ್ಪಣೆ ಪಂದ್ಯದಲ್ಲೇ ಅತೀ ಹೆಚ್ಚು ರನ್​ ನೀಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸಿರಾಜ್ ಸ್ಥಾನ ಪಡೆದಿದ್ದಾರೆ.
ಚೊಚ್ಚಲ ಪಂದ್ಯದಲ್ಲೇ ಅತಿ ಹೆಚ್ಚು ರನ್​ ನೀಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಕರ್ಸನ್​ ಘಾವ್ರಿ ಮೊದಲ ಸ್ಥಾನದಲ್ಲಿದ್ದು, 1975ರಲ್ಲಿ ಘಾವ್ರಿ ಇಂಗ್ಲೆಂಡ್​ ವಿರುದ್ಧದ ಚೊಚ್ಚಲ ಪಂದ್ಯದಲ್ಲಿ 11 ಓವರ್​ ಗಳಲ್ಲಿ 83 ರನ್​ ನೀಡಿದ್ದರು. ಮಂಗಳವಾರ ಸಿರಾಜ್ 10 ಓವರ್ ಗಳಲ್ಲಿ 76 ರನ್ ​ಗಳನ್ನು ನೀಡುವ ಮೂಲಕ ಈ ಕುಖ್ಯಾತಿಯ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅಷ್ಟೇ ಅಲ್ಲದೆ ಪದಾರ್ಪಣೆ ಪಂದ್ಯದಲ್ಲೇ ಅತೀ ಕೆಟ್ಟ ಎಕನಾಮಿ ಹೊಂದಿರುವ  ಬೌಲರ್​ ಎಂಬ ಅಪಕೀರ್ತೀಗೂ ಕೂಡ ಸಿರಾಜ್ ಪಾತ್ರರಾಗಿದ್ದಾರೆ. ಓವರ್ ಗೆ 7.60 ಸರಾಸರಿಯಲ್ಲಿ ರನ್​ ನೀಡಿರುವ ಮೊಹಮ್ಮದ್ ಸಿರಾಜ್​ ಏಕದಿನ ಕ್ರಿಕೆಟ್​ ಕೆರಿಯರ್​ ಅನ್ನು ಕೆಟ್ಟದಾಗಿ ಆರಂಭಿಸಿದ ಭಾರತದ ಪ್ರಥಮ ಬೌಲರ್​ ಎನಿಸಿಕೊಂಡಿದ್ದಾರೆ. ಅತಿ ಹೆಚ್ಚು ರನ್ ನೀಡಿದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಘಾವ್ರಿ 7.54 ಸರಾಸರಿಯಲ್ಲಿ ರನ್​ ಬಿಟ್ಟು ಕೊಟ್ಟು ಎರಡನೇ ಸ್ಥಾನದಲ್ಲಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ
ಇನ್ನು ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿ ದುಬಾರಿಯಾದ ಸಿರಾಜ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT