ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿಗೆ ವಿಶ್ರಾಂತಿ: ನ್ಯೂಜಿಲ್ಯಾಂಡ್ ವಿರುದ್ಧ ಉಳಿದ ಏಕದಿನ, ಟಿ20 ಪಂದ್ಯಗಳಿಗೆ ರೋಹಿತ್ ಶರ್ಮಾ ನಾಯಕ

ನ್ಯೂಜಿಲ್ಯಾಂಡ್ ವಿರುದ್ಧದ ಕೊನೆಯ ಎರಡು ಏಕದಿನ ಹಾಗೂ ಟಿ-20 ಪಂದ್ಯಗಳಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಇಂದು ತಿಳಿಸಿದೆ.

ನವದೆಹಲಿ: ನ್ಯೂಜಿಲ್ಯಾಂಡ್ ವಿರುದ್ಧದ ಕೊನೆಯ ಎರಡು ಏಕದಿನ ಹಾಗೂ ಟಿ-20 ಪಂದ್ಯಗಳಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ  ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಇಂದು ತಿಳಿಸಿದೆ.

ನೆಪಿಯರ್ ನಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಭಾರತ ತಂಡ 8 ವಿಕೆಟ್ ಗಳಿಂದ ಜಯಗಳಿಸಿದ ಕೆಲ ತಾಸುಗಳ ಬಳಿಕ ಈ ಘೋಷಣೆ ಮಾಡಲಾಗಿದೆ.

ಕಳೆದ ಕೆಲವು ತಿಂಗಳುಗಳಿಂದ  ಕೊಹ್ಲಿಗೆ ಕೆಲಸ ಹೆಚ್ಚಿರುವುದನ್ನು ಮನಗಂಡಿರುವ ತಂಡ ನಿರ್ವಹಣೆ ಹಾಗೂ ಹಿರಿಯ ಆಯ್ಕೆದಾರರು ಸಮಿತಿ ಸ್ವದೇಶದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿ ಹಿನ್ನೆಲೆಯಲ್ಲಿ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಕೊಹ್ಲಿ ಅನುಪಸ್ಥಿತಿಯಲ್ಲಿ ರೊಹಿತ್ ಶರ್ಮಾ ಹ್ಯಾಮಿಲ್ಟನ್ ಹಾಗೂ ವೆಲ್ಲಿಂಗ್ಟನ್ ನಲ್ಲಿ ನಡೆಯಲಿರುವ ನಾಲ್ಕು ಹಾಗೂ 5ನೇ ಏಕದಿನ ಪಂದ್ಯಗಳನ್ನು ಮುನ್ನಡೆಸಲಿದ್ದಾರೆ. ಕ್ರಮವಾಗಿ ಜನವರಿ 31 ಹಾಗೂ ಫೆಬ್ರವರಿ 3 ರಂದು ಈ ಎರಡು ಪಂದ್ಯಗಳು ನಡೆಯಲಿವೆ. ಫೆಬ್ರವರಿ 6 ರಿಂದ ನಡೆಯಲಿರುವ ಮೂರು ಟಿ-20 ಪಂದ್ಯಗಳಿಂದಲೂ ಕೊಹ್ಲಿ ಹೊರಗೆ ಉಳಿಯಲಿದ್ದಾರೆ.

 ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಬದಲಿಗೆ ಯಾರನ್ನೂ ತೆಗೆದುಕೊಂಡಿಲ್ಲ. ಕೊನೆಯ ಎರಡು ಹಾಗೂ ಟಿ-20 ಪಂದ್ಯಗಳನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು  ಹೇಳಿಕೆಯಲ್ಲಿ ತಿಳಿಸಲಾಗಿದೆ.

 ಕೊಹ್ಲಿ ಬದಲಿ ಆಟಗಾರರನ್ನು ಬಿಸಿಸಿಐ ಘೋಷಿಸಿದ್ದರೂ ಕಳೆದ ವರ್ಷ ನಡೆದ 19 ವರ್ಷದೊಳಗಿನ ವಿಶ್ವ ಕಪ್ ಕ್ರಿಕೆಟ್ ನಲ್ಲಿ ನಂಬರ್ 3ರ ಬ್ಯಾಟ್ಸ್ ಮನ್ ಆಗಿ ಗಮನ ಸೆಳೆದಿದ್ದ ಸುಬ್ ಮನ್ ಗಿಲ್   ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ.  ಇವರು ಟೂರ್ನಿಯ ಆರು ಪಂದ್ಯಗಳಿಂದ 102 ಸರಾಸರಿಯಲ್ಲಿ 372 ರನ್ ಗಳಿಸುವ ಮೂಲಕ ಸರಣಿ ಶ್ರೇಷ್ಟ ಪ್ರಶಸ್ತಿಗೆ ಪಾತ್ರರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT