ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆ ತತ್‏ಕ್ಷಣದಿಂದ ತೆರವು: ಸಿಒಎ 
ಕ್ರಿಕೆಟ್

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆ ತತ್‏ಕ್ಷಣದಿಂದ ತೆರವು: ಸಿಒಎ

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಸಿಒಎ ಆದೇಶಿಸಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಸಿಒಎ ಆದೇಶಿಸಿದ್ದು,  ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ. 
ತಟಸ್ಥ ಸಲಹೆಗಾರ (ಅಮಿಕಸ್ ಕ್ಯುರಿ) ಅವರ ಸಲಹೆಯನ್ನು ಪಡೆದ ನಂತರ ಸಿಒಎ ಈ ಆದೇಶವನ್ನು ಹೊರಡಿಸಿದೆ. ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಕರಣ್ ಜೋಹರ್ ಅವರ ಟಿವಿ ಶೋನಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಅವರನ್ನು ಆಕ್ಷಣವೇ ಹೊರಗಿಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ಓಂಬುಡ್ಸ್‌ಮನ್ ನ್ನೂ ನೇಮಕ ಮಾಡಿದೆ. 
ಫೆ.05 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿಕಸ್ ಕ್ಯೂರಿಯ ಪಿಎಸ್ ನರಸಿಂಹ ಅವರ ಸಲಹೆ ಪಡೆದ ಬಳಿಕ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ ಎಂದು ಸಿಒಎ ಹೇಳಿಕೆ ಬಿಡುಗಡೆ ಮಾಡಿದೆ. ಅಮಾನತು ಶಿಕ್ಷೆ ವಾಪಸ್ ಪಡೆಯಲಾಗಿರುವುದರಿಂದ ಪಾಂಡ್ಯ ಈಗ ನ್ಯೂಜಿಲ್ಯಾಂಡ್ ಸರಣಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT