ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆ ತತ್‏ಕ್ಷಣದಿಂದ ತೆರವು: ಸಿಒಎ 
ಕ್ರಿಕೆಟ್

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆ ತತ್‏ಕ್ಷಣದಿಂದ ತೆರವು: ಸಿಒಎ

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಸಿಒಎ ಆದೇಶಿಸಿದ್ದು, ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ.

ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮೇಲಿನ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಸಿಒಎ ಆದೇಶಿಸಿದ್ದು,  ತತ್ ಕ್ಷಣದಿಂದಲೇ ಜಾರಿಗೆ ಬರಲಿದೆ. 
ತಟಸ್ಥ ಸಲಹೆಗಾರ (ಅಮಿಕಸ್ ಕ್ಯುರಿ) ಅವರ ಸಲಹೆಯನ್ನು ಪಡೆದ ನಂತರ ಸಿಒಎ ಈ ಆದೇಶವನ್ನು ಹೊರಡಿಸಿದೆ. ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಕರಣ್ ಜೋಹರ್ ಅವರ ಟಿವಿ ಶೋನಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಅವರನ್ನು ಆಕ್ಷಣವೇ ಹೊರಗಿಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ಓಂಬುಡ್ಸ್‌ಮನ್ ನ್ನೂ ನೇಮಕ ಮಾಡಿದೆ. 
ಫೆ.05 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿಕಸ್ ಕ್ಯೂರಿಯ ಪಿಎಸ್ ನರಸಿಂಹ ಅವರ ಸಲಹೆ ಪಡೆದ ಬಳಿಕ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ ಎಂದು ಸಿಒಎ ಹೇಳಿಕೆ ಬಿಡುಗಡೆ ಮಾಡಿದೆ. ಅಮಾನತು ಶಿಕ್ಷೆ ವಾಪಸ್ ಪಡೆಯಲಾಗಿರುವುದರಿಂದ ಪಾಂಡ್ಯ ಈಗ ನ್ಯೂಜಿಲ್ಯಾಂಡ್ ಸರಣಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT