ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿರುವ ಭಾರತಕ್ಕೆ ಮತ್ತೊಂದು ಶಾಕ್: ಬೌಲಿಂಗ್ ನಿಂದ ಅಂಬಟಿ ರಾಯುಡು ಅಮಾನತು! 
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿರುವ ಭಾರತಕ್ಕೆ ಮತ್ತೊಂದು ಶಾಕ್: ಬೌಲಿಂಗ್ ನಿಂದ ಅಂಬಟಿ ರಾಯುಡು ಅಮಾನತು!

ಭಾರತದ ಆಲ್ ರೌಂಡರ್ ಆಂಬಟಿ ರಾಯುಡು ಅವನ್ನು ಬೌಲಿಂಗ್ ನಿಂದ ಅಮಾನತುಗೊಳಿಸಿ ಐಸಿಸಿ ಜ.28 ರಂದು ಆದೇಶ ಹೊರಡಿಸಿದೆ.

ಭಾರತದ ಆಲ್ ರೌಂಡರ್ ಆಂಬಟಿ ರಾಯುಡು ಅವನ್ನು ಬೌಲಿಂಗ್ ನಿಂದ ಅಮಾನತುಗೊಳಿಸಿ ಐಸಿಸಿ ಜ.28 ರಂದು ಆದೇಶ ಹೊರಡಿಸಿದೆ. 
ಜ.13 ರಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರಾಯುಡು ಬೌಲಿಂಗ್ ಶೈಲಿಯ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ರಾಯುಡು ಬೌಲಿಂಗ್ ಶೈಲಿಯ ಬಗ್ಗೆ ಐಸಿಸಿ ಮ್ಯಾಚ್ ರೆಫರಿ ಮತ್ತು ಇತರೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿ ಮುಂದಿನ 14 ದಿನಗಳೊಳಗೆ ಪರೀಕ್ಷೆಗೆ ಒಳಗಾಗಬೇಕೆಂದು ಸೂಚಿಸಿದ್ದರು. ಆದರೆ ಪರೀಕ್ಷೆಗೆ ಒಳಪಡದ ಕಾರಣದಿಂದಾಗಿ ರಾಯುಡುಗೆ ಬೌಲಿಂಗ್ ನಿಂದ ಅಮಾನತುಮಾಡಲಾಗಿದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ. 
ಅಂಬಟಿ ರಾಯುಡು ಪರೀಕ್ಷೆಗೆ ಒಳಪಡುವವರೆಗೂ ಅಮಾನತು ಆದೇಶ ಮುಂದುವರೆಯಲಿದೆ ಎಂದು ಐಸಿಸಿ ಹೇಳಿದೆ. ಈಗಾಗಲೇ ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ರಾಯುಡು ಏಕದಿನ ಕ್ರಿಕೆಟ್‌ನತ್ತ ಹೆಚ್ಚಿನ ಗಮನ ಹಾಯಿಸಿದ್ದಾರೆ. ಅಲ್ಲದೆ ಇದುವರೆಗೆ 46 ಏಕದಿನ ಹಾಗೂ ಆರು ಟ್ವೆಂಟಿ-20 ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಮುಂಬರುವ ವಿಶ್ವಕಪ್ ಹಿನ್ನಲೆಯಲ್ಲಿ ನಂ.4 ಸ್ಥಾನಕ್ಕೆ ರಾಯುಡು ಸೂಕ್ತ ಆಯ್ಕೆ ಎಂದು ನಾಯಕ ವಿರಾಟ್ ಕೊಹ್ಲಿ ಈ ಹಿಂದೆಯೇ ಸ್ಪಷ್ಟನೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT