ಮಾಯಾಂಕ್ ಅಗರವಾಲ್-ವಿರಾಟ್ ಕೊಹ್ಲಿ 
ಕ್ರಿಕೆಟ್

ಕನ್ನಡಿಗ ಮಾಯಾಂಕ್ ಅಗರವಾಲ್ ಆಯ್ಕೆ ಹಿಂದೆ ವಿರಾಟ್ ಕೊಹ್ಲಿ-ರವಿಶಾಸ್ತ್ರಿ ಕೈವಾಡ?

ದೇವರ ಅನುಗ್ರಹವೇನೋ ಎಂಬಂತೆ ಟೂರ್ನಿಯ ಕೊನೆಯಲ್ಲಿ ಕರ್ನಾಟಕ ಆಟಗಾರ ಮಾಯಂಕ್ ಅಗರವಾಲ್ ವಿಶ್ವಕಪ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು...

ನವದೆಹಲಿ: ದೇವರ ಅನುಗ್ರಹವೇನೋ ಎಂಬಂತೆ ಟೂರ್ನಿಯ ಕೊನೆಯಲ್ಲಿ ಕರ್ನಾಟಕ ಆಟಗಾರ ಮಾಯಂಕ್ ಅಗರವಾಲ್ ವಿಶ್ವಕಪ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು ಇದರ ಹಿಂದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ.
ಮಾಯಾಂಕ್ ಇಲ್ಲಿಯವರೆಗೂ ಒಂದೇ ಒಂದು ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿಲ್ಲ ಆದರೂ ಅಗರವಾಲ್ ಆಯ್ಕೆಗೆ ಕಾರಣವೇನು ಎಂಬ ಮಾತು ಕೇಳಿಬಂದಿತ್ತು. ತಂಡಕ್ಕೆ ಯಾರನ್ನಾದರೂ ಆಯ್ಕೆ ಮಾಡಬೇಕು ಎಂದರೆ ಬಿಸಿಸಿಐ ಆಯ್ಕೆ ಸಮಿತಿ ನಿರ್ಧಾರ ಮಾಡಬೇಕು. ಆದರೆ ಮಾಯಾಂಕ್ ರನ್ನು ಆಯ್ಕೆ ಸಮಿತಿ ಬದಲಿಗೆ ಟೀಂ ಮ್ಯಾನೇಜ್ ಮೆಂಟ್ ಆಯ್ಕೆ ಮಾಡಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ.
ಮಾಯಾಂಕ್ ಅಗರವಾಲ್ ಇಂಗ್ಲೆಂಡ್ ನಲ್ಲಿ ನಡೆದಿದ್ದ ಭಾರತ ಎ, ವೆಸ್ಟ್ ಇಂಡೀಸ್ ಎ ಮತ್ತು ಇಂಗ್ಲೆಂಡ್ ಎ ಲಯನ್ಸ್ ತಂಡಗಳ ನಡುವಿನ ತ್ರಿಕೋನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 
ನಾಲ್ಕು ಇನ್ನಿಂಗ್ಸ್ ನಲ್ಲಿ ಮಾಯಾಂಕ್ ಎರಡು ಶತಕ ಬಾರಿಸಿದ್ದು ಒಟ್ಟು 287 ರನ್ ಗಳಿಸಿದ್ದರು. ಈ ಪ್ರದರ್ಶನದ ಆಧಾರದ ಮೇಲೆ ಅಗರವಾಲ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT