ಮಾಯಾಂಕ್ ಅಗರವಾಲ್-ವಿರಾಟ್ ಕೊಹ್ಲಿ 
ಕ್ರಿಕೆಟ್

ಕನ್ನಡಿಗ ಮಾಯಾಂಕ್ ಅಗರವಾಲ್ ಆಯ್ಕೆ ಹಿಂದೆ ವಿರಾಟ್ ಕೊಹ್ಲಿ-ರವಿಶಾಸ್ತ್ರಿ ಕೈವಾಡ?

ದೇವರ ಅನುಗ್ರಹವೇನೋ ಎಂಬಂತೆ ಟೂರ್ನಿಯ ಕೊನೆಯಲ್ಲಿ ಕರ್ನಾಟಕ ಆಟಗಾರ ಮಾಯಂಕ್ ಅಗರವಾಲ್ ವಿಶ್ವಕಪ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು...

ನವದೆಹಲಿ: ದೇವರ ಅನುಗ್ರಹವೇನೋ ಎಂಬಂತೆ ಟೂರ್ನಿಯ ಕೊನೆಯಲ್ಲಿ ಕರ್ನಾಟಕ ಆಟಗಾರ ಮಾಯಂಕ್ ಅಗರವಾಲ್ ವಿಶ್ವಕಪ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು ಇದರ ಹಿಂದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ.
ಮಾಯಾಂಕ್ ಇಲ್ಲಿಯವರೆಗೂ ಒಂದೇ ಒಂದು ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿಲ್ಲ ಆದರೂ ಅಗರವಾಲ್ ಆಯ್ಕೆಗೆ ಕಾರಣವೇನು ಎಂಬ ಮಾತು ಕೇಳಿಬಂದಿತ್ತು. ತಂಡಕ್ಕೆ ಯಾರನ್ನಾದರೂ ಆಯ್ಕೆ ಮಾಡಬೇಕು ಎಂದರೆ ಬಿಸಿಸಿಐ ಆಯ್ಕೆ ಸಮಿತಿ ನಿರ್ಧಾರ ಮಾಡಬೇಕು. ಆದರೆ ಮಾಯಾಂಕ್ ರನ್ನು ಆಯ್ಕೆ ಸಮಿತಿ ಬದಲಿಗೆ ಟೀಂ ಮ್ಯಾನೇಜ್ ಮೆಂಟ್ ಆಯ್ಕೆ ಮಾಡಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ.
ಮಾಯಾಂಕ್ ಅಗರವಾಲ್ ಇಂಗ್ಲೆಂಡ್ ನಲ್ಲಿ ನಡೆದಿದ್ದ ಭಾರತ ಎ, ವೆಸ್ಟ್ ಇಂಡೀಸ್ ಎ ಮತ್ತು ಇಂಗ್ಲೆಂಡ್ ಎ ಲಯನ್ಸ್ ತಂಡಗಳ ನಡುವಿನ ತ್ರಿಕೋನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 
ನಾಲ್ಕು ಇನ್ನಿಂಗ್ಸ್ ನಲ್ಲಿ ಮಾಯಾಂಕ್ ಎರಡು ಶತಕ ಬಾರಿಸಿದ್ದು ಒಟ್ಟು 287 ರನ್ ಗಳಿಸಿದ್ದರು. ಈ ಪ್ರದರ್ಶನದ ಆಧಾರದ ಮೇಲೆ ಅಗರವಾಲ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT