ಮಾಯಾಂಕ್ ಅಗರವಾಲ್-ವಿರಾಟ್ ಕೊಹ್ಲಿ 
ಕ್ರಿಕೆಟ್

ಕನ್ನಡಿಗ ಮಾಯಾಂಕ್ ಅಗರವಾಲ್ ಆಯ್ಕೆ ಹಿಂದೆ ವಿರಾಟ್ ಕೊಹ್ಲಿ-ರವಿಶಾಸ್ತ್ರಿ ಕೈವಾಡ?

ದೇವರ ಅನುಗ್ರಹವೇನೋ ಎಂಬಂತೆ ಟೂರ್ನಿಯ ಕೊನೆಯಲ್ಲಿ ಕರ್ನಾಟಕ ಆಟಗಾರ ಮಾಯಂಕ್ ಅಗರವಾಲ್ ವಿಶ್ವಕಪ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು...

ನವದೆಹಲಿ: ದೇವರ ಅನುಗ್ರಹವೇನೋ ಎಂಬಂತೆ ಟೂರ್ನಿಯ ಕೊನೆಯಲ್ಲಿ ಕರ್ನಾಟಕ ಆಟಗಾರ ಮಾಯಂಕ್ ಅಗರವಾಲ್ ವಿಶ್ವಕಪ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು ಇದರ ಹಿಂದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ.
ಮಾಯಾಂಕ್ ಇಲ್ಲಿಯವರೆಗೂ ಒಂದೇ ಒಂದು ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿಲ್ಲ ಆದರೂ ಅಗರವಾಲ್ ಆಯ್ಕೆಗೆ ಕಾರಣವೇನು ಎಂಬ ಮಾತು ಕೇಳಿಬಂದಿತ್ತು. ತಂಡಕ್ಕೆ ಯಾರನ್ನಾದರೂ ಆಯ್ಕೆ ಮಾಡಬೇಕು ಎಂದರೆ ಬಿಸಿಸಿಐ ಆಯ್ಕೆ ಸಮಿತಿ ನಿರ್ಧಾರ ಮಾಡಬೇಕು. ಆದರೆ ಮಾಯಾಂಕ್ ರನ್ನು ಆಯ್ಕೆ ಸಮಿತಿ ಬದಲಿಗೆ ಟೀಂ ಮ್ಯಾನೇಜ್ ಮೆಂಟ್ ಆಯ್ಕೆ ಮಾಡಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ.
ಮಾಯಾಂಕ್ ಅಗರವಾಲ್ ಇಂಗ್ಲೆಂಡ್ ನಲ್ಲಿ ನಡೆದಿದ್ದ ಭಾರತ ಎ, ವೆಸ್ಟ್ ಇಂಡೀಸ್ ಎ ಮತ್ತು ಇಂಗ್ಲೆಂಡ್ ಎ ಲಯನ್ಸ್ ತಂಡಗಳ ನಡುವಿನ ತ್ರಿಕೋನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 
ನಾಲ್ಕು ಇನ್ನಿಂಗ್ಸ್ ನಲ್ಲಿ ಮಾಯಾಂಕ್ ಎರಡು ಶತಕ ಬಾರಿಸಿದ್ದು ಒಟ್ಟು 287 ರನ್ ಗಳಿಸಿದ್ದರು. ಈ ಪ್ರದರ್ಶನದ ಆಧಾರದ ಮೇಲೆ ಅಗರವಾಲ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT