ಮಾಯಾಂಕ್ ಅಗರವಾಲ್-ವಿರಾಟ್ ಕೊಹ್ಲಿ 
ಕ್ರಿಕೆಟ್

ಕನ್ನಡಿಗ ಮಾಯಾಂಕ್ ಅಗರವಾಲ್ ಆಯ್ಕೆ ಹಿಂದೆ ವಿರಾಟ್ ಕೊಹ್ಲಿ-ರವಿಶಾಸ್ತ್ರಿ ಕೈವಾಡ?

ದೇವರ ಅನುಗ್ರಹವೇನೋ ಎಂಬಂತೆ ಟೂರ್ನಿಯ ಕೊನೆಯಲ್ಲಿ ಕರ್ನಾಟಕ ಆಟಗಾರ ಮಾಯಂಕ್ ಅಗರವಾಲ್ ವಿಶ್ವಕಪ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು...

ನವದೆಹಲಿ: ದೇವರ ಅನುಗ್ರಹವೇನೋ ಎಂಬಂತೆ ಟೂರ್ನಿಯ ಕೊನೆಯಲ್ಲಿ ಕರ್ನಾಟಕ ಆಟಗಾರ ಮಾಯಂಕ್ ಅಗರವಾಲ್ ವಿಶ್ವಕಪ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು ಇದರ ಹಿಂದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ.
ಮಾಯಾಂಕ್ ಇಲ್ಲಿಯವರೆಗೂ ಒಂದೇ ಒಂದು ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿಲ್ಲ ಆದರೂ ಅಗರವಾಲ್ ಆಯ್ಕೆಗೆ ಕಾರಣವೇನು ಎಂಬ ಮಾತು ಕೇಳಿಬಂದಿತ್ತು. ತಂಡಕ್ಕೆ ಯಾರನ್ನಾದರೂ ಆಯ್ಕೆ ಮಾಡಬೇಕು ಎಂದರೆ ಬಿಸಿಸಿಐ ಆಯ್ಕೆ ಸಮಿತಿ ನಿರ್ಧಾರ ಮಾಡಬೇಕು. ಆದರೆ ಮಾಯಾಂಕ್ ರನ್ನು ಆಯ್ಕೆ ಸಮಿತಿ ಬದಲಿಗೆ ಟೀಂ ಮ್ಯಾನೇಜ್ ಮೆಂಟ್ ಆಯ್ಕೆ ಮಾಡಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ.
ಮಾಯಾಂಕ್ ಅಗರವಾಲ್ ಇಂಗ್ಲೆಂಡ್ ನಲ್ಲಿ ನಡೆದಿದ್ದ ಭಾರತ ಎ, ವೆಸ್ಟ್ ಇಂಡೀಸ್ ಎ ಮತ್ತು ಇಂಗ್ಲೆಂಡ್ ಎ ಲಯನ್ಸ್ ತಂಡಗಳ ನಡುವಿನ ತ್ರಿಕೋನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 
ನಾಲ್ಕು ಇನ್ನಿಂಗ್ಸ್ ನಲ್ಲಿ ಮಾಯಾಂಕ್ ಎರಡು ಶತಕ ಬಾರಿಸಿದ್ದು ಒಟ್ಟು 287 ರನ್ ಗಳಿಸಿದ್ದರು. ಈ ಪ್ರದರ್ಶನದ ಆಧಾರದ ಮೇಲೆ ಅಗರವಾಲ್ ರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT