ಎಂಎಸ್ ಧೋನಿ 
ಕ್ರಿಕೆಟ್

ಎಂಎಸ್ ಧೋನಿಗೆ ಏನಾಯ್ತು? ಆಟದ ಮಧ್ಯೆ ಮೈದಾನದಲ್ಲಿ ರಕ್ತ ಉಗುಳಿದ ಧೋನಿ, ಅಭಿಮಾನಿಗಳಲ್ಲಿ ಆತಂಕ!

ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಬರ್ಮಿಂಗ್ ಹ್ಯಾಮ್: ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲೇ ಧೋನಿ ರಕ್ತ ಉಗುಳಿದ ಫೋಟೋ ವೈರಲ್ ಆಗಿದ್ದು ಇದು ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ.
ಆತಿಥೇಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಗಳಿಂದ ಸೋಲು ಕಂಡಿದೆ. ಇನ್ನು ಇದೇ ಪಂದ್ಯದಲ್ಲಿ ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಗಾಯದ ನಡುವೆಯೂ ಎಂಎಸ್ ಧೋನಿ ಬ್ಯಾಟಿಂಗ್ ಮುಂದುವರಿಸಿದ್ದರು. 
ಕೈ ಬೆರಳಿನಿಂದ ಜಿನುಗುತ್ತಿದ್ದ ರಕ್ತವನ್ನು ಚೀಪಿ ಧೋನಿ ಅದನ್ನು ಮೈದಾನದಲ್ಲಿ ಉಗುಳಿದ್ದರು. ಈ ಫೋಟೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಧೋನಿ ವೃತ್ತಿಪರತೆ ಹಾಗೂ ದೇಶಕ್ಕಾಗಿ ತಮ್ಮ ನೋವನ್ನೇ ಮರೆತು ಆಡುತ್ತಿದ್ದಾರೆ ಎಂದು ಕೊಂಡಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT