ಸಂಗ್ರಹ ಚಿತ್ರ 
ಕ್ರಿಕೆಟ್

ಭಾರತ-ಲಂಕಾ ಕದನ ವೇಳೆ ಆಗಸದಲ್ಲಿ ಭಾರತ ವಿರೋಧಿ ಹೇಳಿಕೆ ಬ್ಯಾನರ್, ಐಸಿಸಿಗೆ ಬಿಸಿಸಿಐ ಪತ್ರ!

ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾ-ಶ್ರೀಲಂಕಾ ನಡುವಿನ ಪಂದ್ಯದ ವೇಳೆ ಹೆಡಿಂಗ್ಲೆ ಕ್ರೀಡಾಂಗಣದ ಮೇಲೆ ವಿಮಾನವೊಂದು ಭಾರತ ವಿರೋಧಿ ಹೇಳಿಕೆಯುಳ್ಳ ಭಿತ್ತಿ ಪತ್ರವನ್ನು ಪ್ರದರ್ಶಿಸುತ್ತಾ ಹಾರಾಟ ನಡೆಸಿತ್ತು.

ಲೀಡ್ಸ್: ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾ-ಶ್ರೀಲಂಕಾ ನಡುವಿನ ಪಂದ್ಯದ ವೇಳೆ ಹೆಡಿಂಗ್ಲೆ ಕ್ರೀಡಾಂಗಣದ ಮೇಲೆ ವಿಮಾನವೊಂದು ಭಾರತ ವಿರೋಧಿ ಹೇಳಿಕೆಯುಳ್ಳ ಭಿತ್ತಿ ಪತ್ರವನ್ನು ಪ್ರದರ್ಶಿಸುತ್ತಾ ಹಾರಾಟ ನಡೆಸಿತ್ತು. ಈ ಕುರಿತು ಆತಂಕ ವ್ಯಕ್ತಪಡಿಸಿದ ಬಿಸಿಸಿಐ ಐಸಿಸಿಗೆ ಪತ್ರ ಬರೆದಿದೆ.
ಲೀಡ್ಸ್ ನಲ್ಲಿ ಪಂದ್ಯ ಆರಂಭವಾದ ಕೆಲ ಕ್ಷಣದಲ್ಲೇ ಜಸ್ಟಿಸ್ ಫಾರ್ ಕಾಶ್ಮೀರ್ ಎಂಬ ಭಿತ್ತಪತ್ರದೊಂದಿಗೆ ವಿಮಾನ ಮೈದಾನದ ಮೇಲೆ ಹಾರಾಟ ನಡೆಸಿತ್ತು. ಇದಾಗಿ ಅರ್ಧ ಗಂಟೆಯಲ್ಲೇ ಇಂಡಿಯಾ ಸ್ಟಾಪ್ ಗೆನೆಸಿಡಿ, ಫ್ರೀ ಕಾಶ್ಮೀರ್ ಎಂಬ ಭಿತ್ತಪತ್ರದೊಂದಿಗೆ ಮತ್ತೊಂದು ವಿಮಾನ ಹಾರಾಟ ನಡೆಸಿತ್ತು. 
ಇಂತಹ ಘಟನೆಗಳು ಸ್ವೀಕಾರಾರ್ಹವಲ್ಲ. ಸೆಮಿಫೈನಲ್ ನಲ್ಲಿ ಈ ರೀತಿಯ ಘಟನೆ ಪುನರಾವರ್ತನೆಯಾದರೆ ಅದು ನಿಜಕ್ಕೂ ದುರದೃಷ್ಟಕರ. ನಮ್ಮ ಆಟಗಾರರ ಸುರಕ್ಷತೆ ಅತ್ಯುನ್ನತವಾಗಿದೆ ಎಂದು ಕಳವಳ ವ್ಯಕ್ತಪಡಿಸಿ ಬಿಸಿಸಿಐ ಐಸಿಸಿಗೆ ಪತ್ರ ಬರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT