ರಾಹುಲ್ ದ್ರಾವಿಡ್ 
ಕ್ರಿಕೆಟ್

ಬೆಂಗಳೂರು: ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ ಅಧ್ಯಕ್ಷರಾಗಿ 'ಗೋಡೆ' ಖ್ಯಾತಿಯ ರಾಹುಲ್ ದ್ರಾವಿಡ್ ನೇಮಕ

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ (ಎನ್.ಸಿ.ಎ) ಮುಖ್ಯಸ್ಥರನ್ನಾಗಿ ಟೀಂ ಇಂಡಿಯಾ ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಿ ಬಿಸಿಸಿಐ ಆದೇಶಿಸಿದೆ.

ನವದೆಹಲಿ: ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ (ಎನ್.ಸಿ.ಎ) ಮುಖ್ಯಸ್ಥರನ್ನಾಗಿ ಟೀಂ ಇಂಡಿಯಾ ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಿ ಬಿಸಿಸಿಐ ಆದೇಶಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಮಹತ್ವದ ಘೋಷಣೆ ಮಾಡಿದ್ದು ಜುಲೈ 1ರಿಂದಲೇ ದ್ರಾವಿಡ್ ಈ ಹುದ್ದೆ ಅಲಂಕರಿಸಬೇಕಾಗಿತ್ತು. ಆದರೆ ಇಂಡಿಯಾ ಸಿಮೆಂಟ್ಸ್ ಉಪಾಧ್ಯಕ್ಷರಾಗಿದ್ದ ದ್ರಾವಿಡ್ ಗೆ ಎರಡು ಹುದ್ದೆಗಳಲ್ಲಿ ಏಕಕಾಲಕ್ಕೆ ಕಾರ್ಯನಿರ್ವಹಿಸುವ ತೊಡಕು ಉಂಟಾಗಿತ್ತು. ಈಗ ಇಂಡಿಯಾ ಸಿಮೆಂಟ್ಸ್ ದ್ರಾವಿಡ್ ಗೆ ಎನ್‌ಸಿಎ ಅಧ್ಯಕ್ಷ ಸ್ಥಾನದ ಅವಧಿ ಮುಗಿಯುವವರೆಗೆ ರಜೆ ನೀಡುವುದಾಗಿ ಹೇಳಿದೆ. ಹಾಗಾಗಿ ದ್ರಾವಿಡ್ ತಾವು ಎನ್‌ಸಿಎ ಅಧ್ಯಕ್ಷ ಹುದ್ದೆಗೇರುವಲ್ಲಿನ ಅಡ್ಡಿ ನಿವಾರಣೆಯಾದಂತಾಗಿದೆ.
ಎನ್‌ಸಿಎ ಅಧ್ಯಕ್ಷ ಹುದ್ದೆಗೇರುವ ದ್ರಾವಿಡ್ ಇಲ್ಲಿ ಆಟಗಾರರಿಗೆ ತರಬೇತಿ, ಗಾಯಾಳು ಕ್ರೀಡಾಪಟುಗಳಿಗೆ ಪುನಶ್ಚೇತನ ಸೇರಿ ಮಹಿಳಾ ಹಾಗೂ ಪುರುಷ ಕ್ರಿಕೆಟ್ ತಂಡಗಳ ತರಬೇತಿಗಳಿಗೆ ಸಹ ನೆರವಾಗಲಿದ್ದಾರೆ.
ಭಾರತ-ಎ,  ಇಂಡಿಯಾ ಅಂಡರ್ 19, ಇಂಡಿಯಾ ಅಂಡರ್-23 ತಂಡ ಸೇರಿ ಮಹಿಳಾ ಹಾಗೂ ಪುರುಷ ರಾಷ್ಟ್ರೀಯ ಕ್ರಿಕೆಟ್ ತಂಡಗಳ ಕೋಚ್ ಗಳೊಡನೆ ದ್ರಾವಿಡ್ ಕೆಲಸ ಮಾಡಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT