ಕ್ರಿಕೆಟ್

ವಿಶ್ವಕಪ್: ಮೊದಲ ಸೆಮಿಫೈನಲ್ ಗೆ ಮಳೆ ಅಡ್ಡಿ, ಪಂದ್ಯ ನಾಳೆಗೆ ಮುಂದೂಡಿಕೆ

Lingaraj Badiger
ಲಂಡನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಪಂದ್ಯವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯಕ್ಕೆ ಭಾರಿ ಮಳೆ ಅಡ್ಡಿಪಡಿಸಿದ್ದು, ಪ್ರಸ್ತುತ ಆಟ ನಿಂತಿದೆ. ಇತ್ತೀಚಿನ ವರದಿಗಳು ಬಂದಾಗ ಮೈದಾನದಲ್ಲಿ ಮಳೆ ಮುಂದುವರೆದಿದ್ದು, ರೆಫರಿ ಡೇವಿಡ್ ಬೂನ್ ಪಂದ್ಯವನ್ನು ಬುಧವಾರಕ್ಕೆ ಮುಂದೂಡಿದ್ದಾರೆ.
ಭಾರತೀಯ ಕಾಲಮಾನದ ಪ್ರಕಾರ ಇಂದು ಮಧ್ಯಾಹ್ನ 3.00 ಗಂಟೆಗೆ ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯ ಮುಂದುವರೆಯಲಿದೆ.
ಇಂದು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, 46.1 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿದ್ದು, ನಾಳೆ ಪಂದ್ಯ ಮುಂದುವರೆಯಲಿದೆ.
SCROLL FOR NEXT