ರೋಹಿತ್ ಶರ್ಮಾ 
ಕ್ರಿಕೆಟ್

ವಿಶ್ವಕಪ್‌ನಿಂದ ಭಾರತ ಹೊರಕ್ಕೆ: ಕೊಹ್ಲಿ ಬದಲಿಗೆ ರೋಹಿತ್ ಶರ್ಮಾಗೆ ನಾಯಕ ಪಟ್ಟ?

ವಿಶ್ವಕಪ್ ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಮುಂಬೈ: ವಿಶ್ವಕಪ್ ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ, ಟಿ20 ಹಾಗೂ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಮತ್ತು ಜಸ್ ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. 
ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದು ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ಮುಂದಾಗಿದೆ. ಇನ್ನು ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯಗೂ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಗಸ್ಟ್ 3ರಿಂದ ಟಿ20 ಸರಣಿ ಆರಂಭಗೊಳ್ಳಲಿದ್ದು ತದನಂತರ ಏಕದಿನ ಸರಣಿ ಹಾಗೂ ಆಗಸ್ಟ್ 22ರಿಂದ ಟೆಸ್ಟ್ ಸರಣಿ ನಡೆಯಲಿದೆ. ವಿಂಡೀಸ್ ವಿರುದ್ಧ ಮೂರು ಟಿ20, ಮೂರು ಏಕದಿನ ಸರಣಿ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT