ಕೊಹ್ಲಿ-ಕಿವೀಸ್-ಇಂಗ್ಲೆಂಡ್-ಮೈಕಲ್ 
ಕ್ರಿಕೆಟ್

ಟೀಂ ಇಂಡಿಯಾವನ್ನು ಮಣಿಸುವವರು ವಿಶ್ವ ಚಾಂಪಿಯನ್! ಮೈಕಲ್ ವಾನ್ ಭವಿಷ್ಯ ನಿಜವಾಗುತ್ತಾ?

ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಭಾರತವನ್ನು ಸೋಲಿಸುವವರು ವಿಶ್ವಕಪ್ ಚಾಂಪಿಯನ್ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದು ಅದು ನಿಜವಾಗುತ್ತಾ ಎಂದು ಮಾತುಗಳು ಕ್ರಿಕೆಟ್ ವಲಯದಲ್ಲಿ...

ಮ್ಯಾಚೆಂಸ್ಟರ್: 2019ರ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡ ಎಂದು ಹೇಳಲಾಗುತ್ತಿದ್ದ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ರೋಚಕ ಸೋಲು ಕಂಡು ಟೂರ್ನಿಯಿಂದ ಹೊರಬಂದಿದೆ. ಇನ್ನು ಈ ಹಿಂದೆ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಭಾರತವನ್ನು ಸೋಲಿಸುವವರು ವಿಶ್ವಕಪ್ ಚಾಂಪಿಯನ್ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದು ಅದು ನಿಜವಾಗುತ್ತಾ ಎಂದು ಮಾತುಗಳು ಕ್ರಿಕೆಟ್ ವಲಯದಲ್ಲಿ ಚರ್ಚೆಯಾಗುತ್ತಿದೆ.
ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಭಾರತ ವಿರುದ್ಧ 18 ರನ್ ಗಳಿಂದ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಇನ್ನು ಆಸ್ಟ್ರೇಲಿಯಾವನ್ನು ಮಣಿಸಿರುವ ಇಂಗ್ಲೆಂಡ್ ಸಹ ಫೈನಲ್ ಪ್ರವೇಶಿಸಿದ್ದು ಜುಲೈ 14ರಂದು ಲಾರ್ಡ್ಸ್ ನಲ್ಲಿ ಅಂತಿಮ ಹಣಾಹಣಿ ನಡೆಯಲಿದೆ. 
ಇನ್ನು ಟೂರ್ನಿ ಆರಂಭಕ್ಕೂ ಮುನ್ನ ಮೈಕಲ್ ವಾನ್ ಯಾವ ತಂಡ ಟೀಂ ಇಂಡಿಯಾವನ್ನು ಮಣಿಸುತ್ತದೆಯೋ ಆ ತಂಡ ವಿಶ್ವಕಪ್ ಟ್ರೋಫಿ ಎತ್ತ ಹಿಡಿಯಲಿದೆ ಎಂಬ ಭವಿಷ್ಯ ನುಡಿದಿದ್ದರು. ಲೀಗ್ ಹಂತದಲ್ಲಿ ಇಂಗ್ಲೆಂಡ್ ತಂಡ ಭಾರತವನ್ನು ಸೋಲಿಸಿತ್ತು. ಇದೀಗ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಭಾರತವನ್ನು ಸೋಲಿಸಿದೆ. ಹೀಗಾಗಿ ಭಾರತವನ್ನು ಸೋಲಿಸಿರುವ ತಂಡವೇ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಲಿದೆ ಎಂಬುದು ಗಮನಾರ್ಹವಾಗಿದೆ. 
ಈ ಬಾರಿ ಭಾರತವನ್ನು ಮಣಿಸಿದ ನ್ಯೂಜಿಲೆಂಡ್ ಮತ್ತು ಪ್ರಬಲ ಆಸ್ಟ್ರೇಲಿಯಾವನ್ನು ಮಣಿಸಿದ ಇಂಗ್ಲೆಂಡ್ ತಂಡ ವಿಶ್ಪಕಪ್ ಫೈನಲ್ ಪ್ರವೇಶ ಮಾಡಿದ್ದು, ಈ ಎರಡೂ ತಂಡಗಳಲ್ಲಿ ಯಾವುದೇ ತಂಡ ಫೈನಲ್ ನಲ್ಲಿ ಜಯ ಗಳಿಸಿದರೂ, ನೂತನ ಇತಿಹಾಸ ನಿರ್ಮಾಣವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT