ಸೈಮನ್ ಟಫೆಲ್ 
ಕ್ರಿಕೆಟ್

ವಿಶ್ವಕಪ್ ಫೈನಲ್: ಅಂಪೈರ್ ಕೆಟ್ಟ ತೀರ್ಪಿಗೆ ಕಿಡಿಕಾರಿದ ಮಾಜಿ ಅಂಪೈರ್ ಸೈಮನ್ ಟಫೆಲ್, ಈ ವಿಡಿಯೋದಲ್ಲಿ ಏನಿದೆ?

2019ರ ವಿಶ್ವಕಪ್ ಟೂರ್ನಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಇದರಲ್ಲಿ ಪ್ರಮುಖವಾಗಿ ಕಳಪೆ ಅಂಪೈರಿಂಗ್ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಫೈನಲ್...

ಲಾರ್ಡ್ಸ್: 2019ರ ವಿಶ್ವಕಪ್ ಟೂರ್ನಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಇದರಲ್ಲಿ ಪ್ರಮುಖವಾಗಿ ಕಳಪೆ ಅಂಪೈರಿಂಗ್ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಫೈನಲ್ ಪಂದ್ಯದಲ್ಲೂ ಅಂಪೈರ್ ಧರ್ಮಸೇನಾ ಅವರ ಕಳಪೆ ಅಂಪೈರಿಂಗ್ ವಿರುದ್ಧ ಮಾಜಿ ಅಂಪೈರ್ ಸೈಮನ್ ಟಫೆಲ್ ಕಿಡಿಕಾರಿದ್ದಾರೆ. 
ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಕೊನೆಯ ಓವರ್ ನಲ್ಲಿ ಇಂಗ್ಲೆಂಡ್ ಗೆ ಗೆಲ್ಲಲು 15 ರನ್ ಗಳ ಅವಶ್ಯಕತೆ ಇತ್ತು. ಮೂರನೇ ಎಸೆತದಲ್ಲಿ ಬೆನ್ ಸ್ಟೋಕ್ಸ್ ಸಿಕ್ಸರ್ ಬಾರಿಸಿದ್ದರು. ಇದರಿಂದ ಇನ್ನು 3 ಎಸೆತದಲ್ಲಿ ಆಂಗ್ಲರಿಗೆ 9 ರನ್ ಬೇಕಿತ್ತು. ಈ ವೇಳೆ ಡೀಪ್ ಕವರ್ ನಲ್ಲಿ ಸ್ಟೋಕ್ಸ್ ಚೆಂಡನ್ನು ಬಾರಿಸಿದರು. ಎರಡು ರನ್ ತೆಗೆದುಕೊಳ್ಳುವಾಗ ಮಾರ್ಟಿನ್ ಗಲ್ಟಿಲ್ ಮಾಡಿದ ಥ್ರೋ ಸ್ಟೋಕ್ಸ್ ಬ್ಯಾಟ್ ಗೆ ತಗುಲಿ ಬೌಂಡರಿಗೆ ಹೋಗಿತ್ತು. ಇದಕ್ಕೆ ಅಂಪೈರ್ ಧರ್ಮಸೇನಾ ಇಂಗ್ಲೆಂಡ್ ಗೆ ಆರು ರನ್ ನೀಡಿದ್ದು ಇದೀಗ ವಿಶ್ವದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ಮಾತನಾಡಿರುವ ಮಾಜಿ ಅಂಪೈರ್ ಸೈಮನ್ ಟಫೆಲ್ ಇಂಗ್ಲೆಂಡ್ ಗೆ ಆರು ರನ್ ಬದಲಿಗೆ ಐದು ರನ್ ನೀಡಬೇಕಿತ್ತು. ಆರು ರನ್ ನೀಡಿರುವುದು ತಪ್ಪು. ಐಸಿಸಿ ನಿಯಮದ ಪ್ರಕಾರ ಫೀಲ್ಡರ್ ಥ್ರೋ ಮಾಡುವ ಮೊದಲು ಇಬ್ಬರು ಬ್ಯಾಟ್ಸ್ ಮನ್ ಗಳು ಪರಸ್ಪರ ದಾಟಿ ಹೋಗಿರಬೇಕು. ಆಗ ಮಾತ್ರ ಎರಡನೇ ರನ್ ಮಾನ್ಯವಾಗುತ್ತದೆ. ಆದರೆ ಈ ಘಟನೆಯಲ್ಲಿ ಹೀಗಾಗಿರಲಿಲ್ಲ. ಹಾಗಾಗಿ ಐದು ರನ್ ಮಾತ್ರ ನೀಡಬೇಕಿತ್ತು ಮತ್ತು ಮುಂದಿನ ಎಸೆತವನ್ನು ಸ್ಟೋಕ್ಸ್ ಬದಲಾಗಿ ಆದಿಲ್ ರಶೀದ್ ಆಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT