ಸೈಮನ್ ಟಫೆಲ್ 
ಕ್ರಿಕೆಟ್

ವಿಶ್ವಕಪ್ ಫೈನಲ್: ಅಂಪೈರ್ ಕೆಟ್ಟ ತೀರ್ಪಿಗೆ ಕಿಡಿಕಾರಿದ ಮಾಜಿ ಅಂಪೈರ್ ಸೈಮನ್ ಟಫೆಲ್, ಈ ವಿಡಿಯೋದಲ್ಲಿ ಏನಿದೆ?

2019ರ ವಿಶ್ವಕಪ್ ಟೂರ್ನಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಇದರಲ್ಲಿ ಪ್ರಮುಖವಾಗಿ ಕಳಪೆ ಅಂಪೈರಿಂಗ್ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಫೈನಲ್...

ಲಾರ್ಡ್ಸ್: 2019ರ ವಿಶ್ವಕಪ್ ಟೂರ್ನಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಇದರಲ್ಲಿ ಪ್ರಮುಖವಾಗಿ ಕಳಪೆ ಅಂಪೈರಿಂಗ್ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಫೈನಲ್ ಪಂದ್ಯದಲ್ಲೂ ಅಂಪೈರ್ ಧರ್ಮಸೇನಾ ಅವರ ಕಳಪೆ ಅಂಪೈರಿಂಗ್ ವಿರುದ್ಧ ಮಾಜಿ ಅಂಪೈರ್ ಸೈಮನ್ ಟಫೆಲ್ ಕಿಡಿಕಾರಿದ್ದಾರೆ. 
ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಕೊನೆಯ ಓವರ್ ನಲ್ಲಿ ಇಂಗ್ಲೆಂಡ್ ಗೆ ಗೆಲ್ಲಲು 15 ರನ್ ಗಳ ಅವಶ್ಯಕತೆ ಇತ್ತು. ಮೂರನೇ ಎಸೆತದಲ್ಲಿ ಬೆನ್ ಸ್ಟೋಕ್ಸ್ ಸಿಕ್ಸರ್ ಬಾರಿಸಿದ್ದರು. ಇದರಿಂದ ಇನ್ನು 3 ಎಸೆತದಲ್ಲಿ ಆಂಗ್ಲರಿಗೆ 9 ರನ್ ಬೇಕಿತ್ತು. ಈ ವೇಳೆ ಡೀಪ್ ಕವರ್ ನಲ್ಲಿ ಸ್ಟೋಕ್ಸ್ ಚೆಂಡನ್ನು ಬಾರಿಸಿದರು. ಎರಡು ರನ್ ತೆಗೆದುಕೊಳ್ಳುವಾಗ ಮಾರ್ಟಿನ್ ಗಲ್ಟಿಲ್ ಮಾಡಿದ ಥ್ರೋ ಸ್ಟೋಕ್ಸ್ ಬ್ಯಾಟ್ ಗೆ ತಗುಲಿ ಬೌಂಡರಿಗೆ ಹೋಗಿತ್ತು. ಇದಕ್ಕೆ ಅಂಪೈರ್ ಧರ್ಮಸೇನಾ ಇಂಗ್ಲೆಂಡ್ ಗೆ ಆರು ರನ್ ನೀಡಿದ್ದು ಇದೀಗ ವಿಶ್ವದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ಮಾತನಾಡಿರುವ ಮಾಜಿ ಅಂಪೈರ್ ಸೈಮನ್ ಟಫೆಲ್ ಇಂಗ್ಲೆಂಡ್ ಗೆ ಆರು ರನ್ ಬದಲಿಗೆ ಐದು ರನ್ ನೀಡಬೇಕಿತ್ತು. ಆರು ರನ್ ನೀಡಿರುವುದು ತಪ್ಪು. ಐಸಿಸಿ ನಿಯಮದ ಪ್ರಕಾರ ಫೀಲ್ಡರ್ ಥ್ರೋ ಮಾಡುವ ಮೊದಲು ಇಬ್ಬರು ಬ್ಯಾಟ್ಸ್ ಮನ್ ಗಳು ಪರಸ್ಪರ ದಾಟಿ ಹೋಗಿರಬೇಕು. ಆಗ ಮಾತ್ರ ಎರಡನೇ ರನ್ ಮಾನ್ಯವಾಗುತ್ತದೆ. ಆದರೆ ಈ ಘಟನೆಯಲ್ಲಿ ಹೀಗಾಗಿರಲಿಲ್ಲ. ಹಾಗಾಗಿ ಐದು ರನ್ ಮಾತ್ರ ನೀಡಬೇಕಿತ್ತು ಮತ್ತು ಮುಂದಿನ ಎಸೆತವನ್ನು ಸ್ಟೋಕ್ಸ್ ಬದಲಾಗಿ ಆದಿಲ್ ರಶೀದ್ ಆಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT