ಸಂಗ್ರಹ ಚಿತ್ರ 
ಕ್ರಿಕೆಟ್

ನನ್ನ ಜೀವನದುದ್ದಕ್ಕೂ ವಿಲಿಯಮ್ಸನ್ ಬಳಿ ಕ್ಷಮೆ ಯಾಚಿಸುತ್ತೇನೆ: ವಿಶ್ವಕಪ್ ಫೈನಲ್ ಹೀರೋ ಬೆನ್ ಸ್ಟೋಕ್ಸ್!

ನನ್ನ ಜೀವನದುದ್ದಕ್ಕೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬಳಿ ಕ್ಷಮೆ ಕೋರುತ್ತೇನೆ ಎಂದು ಇಂಗ್ಲೆಂಡ್ ತಂಡದ ವಿಶ್ವಕಪ್ ಫೈನಲ್ ಹೀರೋ ಬೆನ್ ಸ್ಟೋಕ್ಸ್ ಹೇಳಿದ್ದಾರೆ.

ಲಂಡನ್: ನನ್ನ ಜೀವನದುದ್ದಕ್ಕೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬಳಿ ಕ್ಷಮೆ ಕೋರುತ್ತೇನೆ ಎಂದು ಇಂಗ್ಲೆಂಡ್ ತಂಡದ ವಿಶ್ವಕಪ್ ಫೈನಲ್ ಹೀರೋ ಬೆನ್ ಸ್ಟೋಕ್ಸ್ ಹೇಳಿದ್ದಾರೆ.
ಇಡೀ ಪಂದ್ಯದ ಗತಿಯನ್ನೇ ಬದಲಿಸಿದ ತಮ್ಮ ರನೌಟ್ ಮಿಸ್ ಕುರಿತಂತೆ ಮಾತನಾಡಿರುವ ಬೆನ್ ಸ್ಟೋಕ್ಸ್, ಅದು ಉದ್ದೇಶಪೂರ್ವಕ ಪ್ರಮಾದವಲ್ಲ. ಆದರೂ ಅದರ ಕುರಿತಂತೆ ತಪ್ಪತಸ್ಥ ಭಾವನೆ ನನ್ನನ್ನು ಕಾಡುತ್ತಿದ್ದು, ನನ್ನ ಜೀವನದದುದ್ದಕ್ಕೂ ನಾನು ಕೇನ್ ವಿಲಿಯಮ್ಸನ್ ರ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದ್ದಾರೆ.
'ತನಗೆ ಅರಿವಿಲ್ಲದಂತೆ ಈ ರೀತಿಯಾಗಿದೆ. ಉದ್ದೇಶ ಪೂರ್ವಕವಾಗಿ ಮಾಡಿಲ್ಲ. ಆದರೂ ಜೀವನದುದ್ದಕ್ಕೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬಳಿ ಕ್ಷಮೆ ಕೇಳುತ್ತೇನೆ ಎಂದು ಸ್ಟೋಕ್ಸ್ ಹೇಳಿದ್ದಾರೆ.
ಇನ್ನು ಲಾರ್ಡ್ಸ್ ನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯ ಹಲವು ರೋಚಕ ತಿರುವು ಪಡೆದಿತ್ತು. ಪಂದ್ಯ ಟೈ ಆದ ಬಳಿಕ ನಡೆದ ಸೂಪರ್ ಓವರ್ ಕೂಡ ಟೈ ಆಗಿತ್ತು. ಬಳಿಕ ಇಂಗ್ಲೆಂಡ್ ತಂಡ ಗಳಿಸಿದ ಬೌಂಡರಿಗಳ ಲೆಕ್ಕಾಚಾರದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು.
ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಗೆ ಕಠಿಣ ಪ್ರಯತ್ನದ ಜೊತೆ ಅದೃಷ್ಠ ಕೂಡ ಕೈ ಹಿಡಿದಿತ್ತು. ಬೆನ್ ಸ್ಟೋಕ್ಸ್ ಅಂತಿಮ ಓವರ್ ನಲ್ಲಿ 2 ರನ್ ಗಾಗಿ ಪ್ರಯತ್ನಿಸಿದ ವೇಳೆ ರನೌಟ್ ತಪ್ಪಿಸಲು ಡೈವ್ ಮಾಡಿದ್ದರು. ಆದರೆ ಥ್ರೋ ನೇರವಾಗಿ ಸ್ಟೋಕ್ಸ್ ಬ್ಯಾಟ್‌ ಗೆ ತಾಗಿ ಬೌಂಡರಿ ಗೆರೆ ದಾಟಿತ್ತು. ಹೀಗಾಗಿ 2 + 4 ಒಟ್ಟು 6 ರನ್ ನಿಡಲಾಗಿತ್ತು. ಇದು ಪಂದ್ಯದ ಗತಿಯನ್ನೇ ಬದಲಿಸಿತು. ಆ ಒಂದು ಘಟನೆ ನಡೆಯದಗೇ ಹೋಗಿದ್ದಲ್ಲಿ ಖಂಡಿತಾ ನ್ಯೂಜಿಲೆಂಡ್ ತಂಡ ಗೆಲುವು ಸಾಧಿಸಿರುತ್ತಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitra

ಜಮ್ಮು: ಎಲ್‌ಒಸಿ ಬಳಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆ

T20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಭಾರತಕ್ಕೆ ಶಾಕ್ ಕೊಟ್ಟ ICC, ಸ್ಟಾರ್ ಆಟಗಾರನಿಗೆ ದುಬಾರಿ ದಂಡ.. ಕಾರಣ ಏನು ಗೊತ್ತಾ?

'ನಾವಿರೋದ್ರಿಂದ ಹಿಂದೂಗಳು ಸುರಕ್ಷಿತ.. ಇಲ್ಲ ಅಂದ್ರೆ ಆ ಸಮುದಾಯದವ್ರು ಮುಗಿಸಿಬಿಡುತ್ತಿದ್ದರು': Mamata Banerjee ವಿವಾದಾತ್ಮಕ ಹೇಳಿಕೆ, ಬಿಜೆಪಿ ಕಿಡಿ

SCROLL FOR NEXT