ಸಂಗ್ರಹ ಚಿತ್ರ 
ಕ್ರಿಕೆಟ್

'ಅತ್ಯಂತ ಕ್ರೂರ'..!, ಬೌಂಡರಿ ಲೆಕ್ಕಾಚಾರದಲ್ಲಿ ವಿಶ್ವಕಪ್ ವಿಜೇತರ ಘೋಷಣೆಗೆ ಮಾಜಿ ಕ್ರಿಕೆಟಿಗರ ಆಕ್ರೋಶ!

ವಿಶ್ವಕಪ್ ಫೈನಲ್ ನ ಸೂಪರ್ ಓವರ್ ಸಹ ಟೈ ಆದರೂ, ಹೆಚ್ಚು ಬೌಂಡರಿ ಬಾರಿಸಿದ ಲೆಕ್ಕಾಚಾರದಲ್ಲಿ ಇಂಗ್ಲೆಂಡ್ ತಂಡವನ್ನು ವಿಜೇತ ಎಂದು ಘೋಷಣೆ ಮಾಡಿದ್ದನ್ನು, ಮಾಜಿ ಕ್ರಿಕೆಟ್ ಆಟಗಾರರು ತೀವ್ರವಾಗಿ ವಿರೋಧಿಸಿದ್ದಾರೆ.

ನವದೆಹಲಿ: ವಿಶ್ವಕಪ್ ಫೈನಲ್ ನ ಸೂಪರ್ ಓವರ್ ಸಹ ಟೈ ಆದರೂ, ಹೆಚ್ಚು ಬೌಂಡರಿ ಬಾರಿಸಿದ ಲೆಕ್ಕಾಚಾರದಲ್ಲಿ ಇಂಗ್ಲೆಂಡ್ ತಂಡವನ್ನು ವಿಜೇತ ಎಂದು ಘೋಷಣೆ ಮಾಡಿದ್ದನ್ನು, ಮಾಜಿ ಕ್ರಿಕೆಟ್ ಆಟಗಾರರು ತೀವ್ರವಾಗಿ ವಿರೋಧಿಸಿದ್ದಾರೆ.
ಪ್ರಮುಖವಾಗಿ ಐಸಿಸಿ ಈ ನಿಯಮದ ವಿರುದ್ಧ ಬಹಿರಂಗವಾಗಿಯೇ ಮಾಜಿ ಆಟಗಾರರು ಕೆಂಡಾಮಂಡಲರಾಗಿದ್ದು, ಐಸಿಸಿಯ ನಿಯಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೌಂಡರಿ ಲೆಕ್ಕಾಚಾರದಲ್ಲಿ ಇಂಗ್ವೆಂಡ್ ತಂಡವನ್ನು ಚಾಂಪಿಯನ್ ಎಂದು ಘೋಷಿಸುವ ಬದಲು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡವನ್ನು ಜಂಟಿ ವಿಜೇತರು ಎಂದು ಘೋಷಣೆ ಮಾಡಬೇಕಿತ್ತು ಎಂದು ಆಗ್ರಹಿಸಿದ್ದಾರೆ. ಅಂತೆಯೇ ಬೌಂಡರಿ ಲೆಕ್ಕಾಚಾರದಲ್ಲಿ ವಿಜೇತರನ್ನು ಘೋಷಿಸಿದ ಐಸಿಸಿ ನಿಯಮದ ವಿರುದ್ಧ ಬೇಸರ ವ್ಯಕ್ತ ಪಡಿಸಿದ್ದಾರೆ.
ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅತ್ಯಂತ ರೋಚಕ ಪಂದ್ಯದಲ್ಲಿ ಇಂಗ್ಲೆಂಡ್-ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಿದ್ದವು. ಕಿವೀಸ್ ತಂಡವನ್ನು ಮಣಿಸಿ ಇಂಗ್ಲೆಂಡ್ ಚೊಚ್ಚಲ ಬಾರಿಗೆ ವಿಶ್ವಕಪ್ ಎತ್ತಿ ಸಂಭ್ರಮಿಸಿತ್ತು. ಎರಡೂ ತಂಡಗಳು 50 ಓವರ್ ಗಳಲ್ಲಿ 241 ರನ್ ಬಾರಿಸಿದ್ದವು. ಇದಾದ ಬಳಿಕ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೂಪರ್ ಓವರ್ ಮೊರೆ ಹೋಗಲಾಯಿತು. ಸೂಪರ್ ಓವರ್ ನಲ್ಲೂ ಎರಡೂ ತಂಡಗಳು 15-15 ರನ್ ಬಾರಿಸಿದ್ದವು. ಐಸಿಸಿ ನಿಯಮದಂತೆ ಸೂಪರ್ ಓವರ್ ಟೈ ಆಗಿದ್ದರಿಂದ, ಇಂಗ್ಲೆಂಡ್ 50 ಓವರ್ ಗಳಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿತ್ತು. ನ್ಯೂಜಿಲೆಂಡ್ 16 ಬೌಂಡರಿ ಬಾರಿಸಿದರೆ, ಇಂಗ್ಲೆಂಡ್ 24 ಬಾರಿ ಚೆಂಡಿಗೆ ಬೌಂಡರಿ ಗೆರೆಯ ದರ್ಶನವನ್ನು ಮಾಡಿಸಿತ್ತು. ಈ ಅಂಕಿ ಅಂಶಗಳ ಆಧಾರದ ಮೇಲೆ ಮಾರ್ಗನ್ ಪಡೆ ಜಯ ಸಾಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT