ಸಂಗ್ರಹ ಚಿತ್ರ 
ಕ್ರಿಕೆಟ್

ವಿಂಡೀಸ್ ಪ್ರವಾಸಕ್ಕೆ ಶೀಘ್ರದಲ್ಲೆ ತಂಡ ಪ್ರಕಟ; ಜುಲೈ 19 ರಂದು ಧೋನಿ ಕ್ರಿಕೆಟ್ ಭವಿಷ್ಯ ನಿರ್ಧಾರ!

ವಿಂಡೀಸ್ ಪ್ರವಾಸಕ್ಕೆ ಇದೇ ಜುಲೈ 19ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಂದೇ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಕ್ರಿಕೆಟ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

ನವದೆಹಲಿ: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ನಿರಾಸೆ ಅನುಭವಿಸಿ ಟೂರ್ನಿಯಿಂದ ಹೊರ ಬಿದ್ದ ಬಳಿಕ ಟೀಂ ಇಂಡಿಯಾಗೆ ಮೊದಲ ಅಗ್ನಿ ಪರೀಕ್ಷೆ ಎದುರಾಗಿದ್ದು, ವಿಂಡೀಸ್ ಪ್ರವಾಸಕ್ಕೆ ಇದೇ ಜುಲೈ 19ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಂದೇ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಕ್ರಿಕೆಟ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.
ಶುಕ್ರವಾರ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಮ್ ಇಂಡಿಯಾ ಆಯ್ಕೆಯನ್ನು, ಐದು ಸದಸ್ಯರ ಆಯ್ಕೆ ಸಮಿತಿ ನಡೆಸಲಿದೆ. ಪ್ರವಾಸ ಆಗಸ್ಟ್ 3ರಿಂದ ಸೆಪ್ಟಂಬರ್ 4 ರವರೆಗಿದ್ದು, ಈ ವೇಳೆ ಭಾರತ ತಂಡ ಮೂರು ಟಿ-20 ಹಾಗೂ ಮೂರು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯವನ್ನಾಡಲಿದೆ.  ಮುಂದಿನ ತಿಂಗಳು ಆರಂಭವಾಗುವ ಈ ಪ್ರವಾಸಕ್ಕೆ ಭಾರತ ತಂಡವನ್ನು ಜೂನ್‌ 19 ಅಥವಾ 20ರಂದು ಪ್ರಕಟಿಸಲಾಗುವುದೆಂದು ಬಿಸಿಸಿಐ ಮೂಲಗಳು ಬುಧವಾರ ಸ್ಪಷ್ಟಪಡಿಸಿವೆ.
ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಭವಿಷ್ಯ ನಿರ್ಧಾರ
ಇದೀಗ ತೀವ್ರ ಕುತೂಹಲ ಕೆರಳಿಸಿರುವುದು ಮಹೇಂದ್ರ ಸಿಂಗ್‌ ಧೋನಿ ಆಯ್ಕೆ ವಿಚಾರ. ಐಸಿಸಿ ವಿಶ್ವಕಪ್‌ ಮುಗಿದ ಬಳಿಕ ಎಂ.ಎಸ್‌ ಧೋನಿ ಅವರು ನಿವೃತ್ತಿ ಘೋಷಿಸಬಹುದಾ ಅಥವಾ ತಂಡದಲ್ಲಿ ಮುಂದುವರಿಯುತ್ತಾರೆಯೇ ಎಂಬ ವಿಚಾರಗಳು ತೀವ್ರ ಕುತೂಹಲ ಕೆರಳಿಸಿದ್ದವು.  ಈ ಬಗ್ಗೆ ಬಿಸಿಸಿಐ ಪ್ರತಿಕ್ರಿಯಿಸಿದ್ದು, ಇನ್ನೂ ವಿಕೆಟ್‌ ಕೀಪರ್‌ ಬ್ಯಾಟ್ಸ್‌ ಮನ್‌ ಧೋನಿ ಅವರನ್ನು ಭೇಟಿಯಾಗಿಲ್ಲ. ಅವರ ಭೇಟಿಯ ನಂತರ ಮುಂದಿನ ನಡೆಯನ್ನು ನಿರ್ಧರಿಸಲಿದ್ದೇವೆ ಎಂದು ತಿಳಿಸಿದೆ. 
"ವೆಸ್ಟ್‌ ಇಂಡೀಸ್‌ ಪ್ರವಾಸದ ಬಗ್ಗೆ ಎಂ.ಎಸ್‌ ಧೋನಿ ಬಗ್ಗೆ ಇನ್ನೂ ಮಾತುಕತೆ ನಡೆಸಿಲ್ಲ. ಮೊದಲು ಅವರನ್ನು ಭೇಟಿಯಾಗಲಿದ್ದೇವೆ. ನಂತರ, ಅವರ ತಂಡಕ್ಕೆ ಲಭ್ಯತೆಯ ಬಗ್ಗೆ ಮುಂದೆ ನಿರ್ಧಾರ ಕೈಗೊಳ್ಳಲಿದ್ದೇವೆ. ವಿಂಡೀಸ್ ಪ್ರವಾಸದ ತಂಡವನ್ನು ಜುಲೈ 19 ಅಥವಾ 20 ರಂದು ಪ್ರಕಟಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ.
ಇತ್ತೀಚೆಗೆ ಮುಕ್ತಾಯವಾಗಿದ್ದ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಕಡಿಮೆ ರನ್‌ ರೇಟ್ ಹೊಂದಿದ್ದ ಧೋನಿ ಅವರ ಮೇಲೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಒಟ್ಟಾರೆ ಟೂರ್ನಿಯಲ್ಲಿ ಅವರು 273 ರನ್‌ ಗಳಿಸಿದ್ದರು. ಇಂಗ್ಲೆಂಡ್‌ ವಿರುದ್ಧದ ರನ್‌ ಚೇಸ್‌ ಮಾಡುವಾಗ ಅವರು ನಿಧಾನಗತಿಯ ಬ್ಯಾಟಿಂಗ್‌ನಿಂದ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ, ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿಯೂ ಧೋನಿ ಅರ್ಧ ಶತಕದ ಹೊರತಾಗಿಯೂ ರನೌಟ್‌ ಆಗುವ ಮೂಲಕ ಭಾರತವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲವಾಗಿದ್ದರು. ಆ ಮೂಲಕ ಭಾರತ ಫೈನಲ್‌ ತಲುಪುವಲ್ಲಿ ವಿಫಲವಾಗಿತ್ತು.
ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ವೇಗಿ ಜಸ್ಪ್ರಿತ್‌ ಬುಮ್ರಾ ಅವರಿಗೆ ವಿಂಡೀಸ್‌ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಗಳಿಂದ ಹೊರಗುಳಿದು, ವಿಶ್ರಾಂತಿ ಪಡೆಯುವ ಸಂಭವವಿದೆ. ಈ ಇಬ್ಬರು ಆಟಗಾರರು ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ ತಂಡ ಕೂಡಿಕೊಳ್ಳಲಿದ್ದಾರೆಂದು ಬಿಸಿಸಿ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಆಗಸ್ಟ್‌ 3 ರಿಂದ ಮೂರು ಪಂದ್ಯಗಳ ಟಿ-20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಆಗಸ್ಟ್‌ 22 ರಿಂದ ಎರಡು ಪಂದ್ಯಗಳ ಟೆಸ್ಟ್‌ ಸರಣಿ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT