ಟೀಂ ಇಂಡಿಯಾ 
ಕ್ರಿಕೆಟ್

ಯಾರಿಗೆ ಸ್ಥಾನ ನೀಡಬೇಕೆಂಬ ಚಿಂತೆ: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ ಮುಂದಕ್ಕೆ!

ಆಗಸ್ಟ್ ಮೂರರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಭಾನುವಾರ ನಡೆಸಲು ನಿರ್ಧರಿಸಿದೆ.

ಮುಂಬೈ: ಆಗಸ್ಟ್ ಮೂರರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಭಾನುವಾರ ನಡೆಸಲು ನಿರ್ಧರಿಸಿದೆ. 
ಎಂ.ಎಸ್.ಕೆ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಂಡೀಸ್ ವಿರುದ್ಧ ನಡೆಯಲಿರುವ 3 ಟಿ-20, 3 ಏಕದಿನ ಹಾಗೂ 2 ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆ ಮಾಡಲಿದೆ. ಈ ಬಗ್ಗೆ ಬಿಸಿಸಿಐ ಶುಕ್ರವಾರ ಪ್ರಕಟಣೆಯನ್ನು ಹೊರಡಿಸಿದ್ದು, ಮುಂಬೈನಲ್ಲಿ ಭಾನುವಾರ ಸಭೆ ನಡೆಸುವುದಾಗಿ ತಿಳಿಸಿದೆ. 
ಸಾಂಪ್ರದಾಯಿಕವಾಗಿ ಬಿಸಿಸಿಐ ಕಾರ್ಯದರ್ಶಿ ನಡೆಸುವ ಟೀಮ್ ಇಂಡಿಯಾದ ತಂಡದ ಆಯ್ಕೆಗೆ ಬ್ರೇಕ್ ಬಿದ್ದಿದ್ದು, ಆಯ್ಕೆ ಸಮಿತಿಯ ಮುಖ್ಯಸ್ಥ ಎಂ ಎಸ್ ಕೆ ಅವರು ಈ ಕಾರ್ಯ ನಿಭಾಯಿಸುವಂತೆ ಕ್ರಿಕೆಟ್ ಆಡಳಿತ ಸಮಿತಿ (ಸಿಒಎ) ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕರೆಯಲಾಗಿದ್ದ ಸಭೆಯನ್ನು ಮುಂದೂಡಿ ಆದೇಶವನ್ನು ಹೊರಡಿಸಲಾಗಿತ್ತು. 
ಮೊದಲು ಟೀಮ್ ಇಂಡಿಯಾದ ಆಯ್ಕೆ ನಡೆಯುವಾಗ ಬಿಸಿಸಿಐ ಕಾರ್ಯದರ್ಶಿಗಳು ಆಯ್ಕೆ ಸಮಿತಿಯ ಸಭೆಯಲ್ಲಿ ಭಾಗವಹಿಸುವುದು ವಾಡಿಕೆ ಆಗಿತ್ತು. ಬಿಸಿಸಿಐ ಆಡಳಿತದಲ್ಲಿ ಬದಲಾವಣೆ ತರಲಾಗಿದ್ದು, ಮ್ಯಾನೇಜ್ಮೆಂಟ್ ಹಾಗೂ ಆಡಳಿತವನ್ನು ಬೇರ್ಪಡಿಸಲು ಮುಂದಾಗಿದೆ. 
ಬಿಸಿಸಿಐ ನೂತನ ಸಂವಿಧಾನದ ಬಳಿಕವೂ ಕಾರ್ಯದರ್ಶಿಗಳು ಆಯ್ಕೆ ಸಮಿತಿಯ ಸಭೆ ನಡೆಸಿಕೊಂಡು ಬರುತ್ತಿದ್ದರು. ಅಲ್ಲದೆ ಆಟಗಾರರ ಬದಲಾವಣೆ ಹಾಗೂ ಸೇರ್ಪಡೆ ಕಾರ್ಯದರ್ಶಿ ಅವರಿಗೆ ಇ-ಮೇಲ್ ಮಾಡಬೇಕಿತ್ತು. ಇನ್ನು  ಅನುಮತಿ ಕೋರುವ ಅವಶ್ಯಕತೆ ಇಲ್ಲ ಎಂದು ಸಿಒಎ ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು