ಟೀಂ ಇಂಡಿಯಾ 
ಕ್ರಿಕೆಟ್

ಯಾರಿಗೆ ಸ್ಥಾನ ನೀಡಬೇಕೆಂಬ ಚಿಂತೆ: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ ಮುಂದಕ್ಕೆ!

ಆಗಸ್ಟ್ ಮೂರರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಭಾನುವಾರ ನಡೆಸಲು ನಿರ್ಧರಿಸಿದೆ.

ಮುಂಬೈ: ಆಗಸ್ಟ್ ಮೂರರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಭಾನುವಾರ ನಡೆಸಲು ನಿರ್ಧರಿಸಿದೆ. 
ಎಂ.ಎಸ್.ಕೆ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಂಡೀಸ್ ವಿರುದ್ಧ ನಡೆಯಲಿರುವ 3 ಟಿ-20, 3 ಏಕದಿನ ಹಾಗೂ 2 ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆ ಮಾಡಲಿದೆ. ಈ ಬಗ್ಗೆ ಬಿಸಿಸಿಐ ಶುಕ್ರವಾರ ಪ್ರಕಟಣೆಯನ್ನು ಹೊರಡಿಸಿದ್ದು, ಮುಂಬೈನಲ್ಲಿ ಭಾನುವಾರ ಸಭೆ ನಡೆಸುವುದಾಗಿ ತಿಳಿಸಿದೆ. 
ಸಾಂಪ್ರದಾಯಿಕವಾಗಿ ಬಿಸಿಸಿಐ ಕಾರ್ಯದರ್ಶಿ ನಡೆಸುವ ಟೀಮ್ ಇಂಡಿಯಾದ ತಂಡದ ಆಯ್ಕೆಗೆ ಬ್ರೇಕ್ ಬಿದ್ದಿದ್ದು, ಆಯ್ಕೆ ಸಮಿತಿಯ ಮುಖ್ಯಸ್ಥ ಎಂ ಎಸ್ ಕೆ ಅವರು ಈ ಕಾರ್ಯ ನಿಭಾಯಿಸುವಂತೆ ಕ್ರಿಕೆಟ್ ಆಡಳಿತ ಸಮಿತಿ (ಸಿಒಎ) ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕರೆಯಲಾಗಿದ್ದ ಸಭೆಯನ್ನು ಮುಂದೂಡಿ ಆದೇಶವನ್ನು ಹೊರಡಿಸಲಾಗಿತ್ತು. 
ಮೊದಲು ಟೀಮ್ ಇಂಡಿಯಾದ ಆಯ್ಕೆ ನಡೆಯುವಾಗ ಬಿಸಿಸಿಐ ಕಾರ್ಯದರ್ಶಿಗಳು ಆಯ್ಕೆ ಸಮಿತಿಯ ಸಭೆಯಲ್ಲಿ ಭಾಗವಹಿಸುವುದು ವಾಡಿಕೆ ಆಗಿತ್ತು. ಬಿಸಿಸಿಐ ಆಡಳಿತದಲ್ಲಿ ಬದಲಾವಣೆ ತರಲಾಗಿದ್ದು, ಮ್ಯಾನೇಜ್ಮೆಂಟ್ ಹಾಗೂ ಆಡಳಿತವನ್ನು ಬೇರ್ಪಡಿಸಲು ಮುಂದಾಗಿದೆ. 
ಬಿಸಿಸಿಐ ನೂತನ ಸಂವಿಧಾನದ ಬಳಿಕವೂ ಕಾರ್ಯದರ್ಶಿಗಳು ಆಯ್ಕೆ ಸಮಿತಿಯ ಸಭೆ ನಡೆಸಿಕೊಂಡು ಬರುತ್ತಿದ್ದರು. ಅಲ್ಲದೆ ಆಟಗಾರರ ಬದಲಾವಣೆ ಹಾಗೂ ಸೇರ್ಪಡೆ ಕಾರ್ಯದರ್ಶಿ ಅವರಿಗೆ ಇ-ಮೇಲ್ ಮಾಡಬೇಕಿತ್ತು. ಇನ್ನು  ಅನುಮತಿ ಕೋರುವ ಅವಶ್ಯಕತೆ ಇಲ್ಲ ಎಂದು ಸಿಒಎ ತಿಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT