ಶುಭ್ ಮನ್ ಗಿಲ್ 
ಕ್ರಿಕೆಟ್

ವಿಂಡೀಸ್ ಪ್ರವಾಸ: ತಂಡದಲ್ಲಿ ಸ್ಥಾನ ಸಿಗದಕ್ಕೆ ಶುಭ್ ಮನ್ ಗಿಲ್ ಬೇಸರ

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡದಲ್ಲಿ ಸ್ಥಾನ ಲಭಿಸದರಿವುದರಿಂದ ನಿರಾಸೆ ಆಗಿದೆ ಎಂದು ಯುವ ಆಟಗಾರ ಶುಭ್ ಮನ್ ಗಿಲ್ ತಿಳಿಸಿದ್ದಾರೆ.

ನವದೆಹಲಿ: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡದಲ್ಲಿ ಸ್ಥಾನ ಲಭಿಸದರಿವುದರಿಂದ ನಿರಾಸೆ ಆಗಿದೆ ಎಂದು ಯುವ ಆಟಗಾರ ಶುಭ್ ಮನ್ ಗಿಲ್ ತಿಳಿಸಿದ್ದಾರೆ. 
ಐಸಿಸಿ ವಿಶ್ವಕಪ್ ನಲ್ಲಿ ಭಾರತ ತಂಡದ ಸೆಮಿಫೈನಲ್ಸ್ ನಲ್ಲಿ ಸೋತ ಬಳಿಕ ಯುವ ಆಟಗಾರರಿಗೆ ಮಣೆ ಹಾಕುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ವಿಂಡೀಸ್ ವಿರುದ್ಧದ ಸರಣಿಗೆ ಮನೀಷ್ ಪಾಂಡೆ ಹಾಗೂ ಶ್ರೇಯಸ್ ಅಯ್ಯರ್ ಅವರಿಗೆ ಸ್ಥಾನ ನೀಡಲಾಗಿದ್ದು, ಈ ಸ್ಟಾರ್ ಆಟಗಾರರು ವಿಂಡೀಸ್ ವಿರುದ್ಧ ಭಾರತ ‘ಎ’ ತಂಡದ ಪರ ಭರ್ಜರಿ ಪ್ರದರ್ಶನ ನೀಡಿದ್ದಾರೆ. 
ಯುವ ಆಟಗಾರ ವಿಂಡೀಸ್ ವಿರುದ್ಧದ ಟಿ-20 ಹಾಗೂ ಏಕದಿನ ಸರಣಿಗೆ ಶುಭ್ ಮನ್ ಗಿಲ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಗಿಲ್ ಅವರು ವಿಂಡೀಸ್ ವಿರುದ್ಧದ ಸರಣಿಯಲ್ಲಿ 218 ರನ್ ಬಾರಿಸಿದ್ದಾರೆ. 
‘ಭಾರತ ತಂಡದಲ್ಲಿ ಸ್ಥಾನ ಪಡೆಯಲು ಉತ್ಸುಕನಾಗಿದ್ದೇನೆ. ವಿಂಡೀಸ್ ಪ್ರವಾಸದಲ್ಲಿ ಭಾರತ ತಂಡದಲ್ಲಿ ಸ್ಥಾನ ಸಿಗುವ ಕನಸು ಕಂಡಿದ್ದೆ. ಯಾವುದಾದರೂ ಒಂದು ಮಾದರಿಯಲ್ಲಿ ತಂಡ ಸೇರುವ ಹಂಬಲವಿತ್ತು. ತಂಡದಲ್ಲಿ ಸ್ಥಾನ ಸಿಗದೇ ಇದ್ದಾಗ ನಿರಾಸೆ ಆಗಿದೆ. ಆದರೂ, ಧೃತಿಗೆಡದೆ ಅಭ್ಯಾಸ ನಡೆಸುವೆ ಎಂದಿದ್ದಾರೆ. 
‘ಯಾವುದೇ ಸ್ಥಾನ ಹಾಗೂ ವಾತಾವರಣಕ್ಕೆ ಹೊಂದಿಕೊಂಡು ಆಡಲು ತಯಾರಿ ನಡೆಸಬೇಕಿದೆ. ಉತ್ತಮ ಎಸೆತಗಳನ್ನು ಗೌರವಿಸುತ್ತಾ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಕಾಲ ಕಳೆಯುವುದನ್ನು ಕಲಿಯಬೇಕಿದೆ. ಕಠಿಣ ಸಮಯದಲ್ಲಿ ಬ್ಯಾಟಿಂಗ್ ಮಾಡುವ ಸವಾಲನ್ನು ಮೆಟ್ಟಿ ನಿಲ್ಲುವ ಆಟ ಮೈಗೂಡಿಸಿಕೊಳ್ಳಬೇಕಿದೆ ಎಂದು ಗಿಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT