ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 
ಕ್ರಿಕೆಟ್

ರೋಹಿತ್-ಕೊಹ್ಲಿ ಮುನಿಸು: ವಿಂಡೀಸ್‌ ಪ್ರವಾಸಕ್ಕೂ ಮುನ್ನ ಭಾರತ ತಂಡದಿಂದ ಸುದ್ದಿಗೋಷ್ಠಿ ಇಲ್ಲ: ಬಿಸಿಸಿಐ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಒಳಜಗಳ ಇದೀಗ ಜಗ್ಗಜಾಹೀರ್ ಆಗಿದ್ದು ಈ ನಡುವೆ ವೆಸ್ಟ್ ಇಂಡೀಸ್ ಪ್ರವಾಸಕ್ಕೂ...

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವಿನ ಒಳಜಗಳ ಇದೀಗ ಜಗ್ಗಜಾಹೀರ್ ಆಗಿದ್ದು ಈ ನಡುವೆ ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಮುನ್ನ ನಡೆಯಬೇಕಿದ್ದ ಸುದ್ಧಿಗೋಷ್ಠಿಯೇ ರದ್ದಾಗಿದೆ.
ವೆಸ್ಟ್‌ ಇಂಡೀಸ್‌ ಪ್ರವಾಸ ತೆರಳುವ ಮುನ್ನ ಟೀಮ್‌ ಇಂಡಿಯಾ ಯಾವುದೇ ಸುದ್ದಿಗೋಷ್ಠಿ ಹಮ್ಮಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳು ಭಾನುವಾರ ಧೃಡಪಡಿಸಿವೆ. 
ವೆಸ್ಟ್‌ ಇಂಡೀಸ್‌ಗೆ ಪ್ರಯಾಣ ಬೆಳೆಸುವುದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಆದರೆ, ಸಾಧ್ಯವಾಗಲಿಲ್ಲ. ಹಾಗಾಗಿ, ಕೆರಿಬಿಯನ್‌ ಪ್ರವಾಸಕ್ಕೂ ಮುನ್ನ ಯಾವುದೇ ಸುದ್ಧಿಗೋಷ್ಠಿ ಇಲ್ಲವೆಂದು" ಬಿಸಿಸಿಐ ಮೂಲಗಳು ಹೇಳಿವೆ. 
ಮೂರು ಪಂದ್ಯಗಳ ಟಿ-20, ಮೂರು ಪಂದ್ಯಗಳ ಏಕದಿನ ಹಾಗೂ ಎರಡು ಪಂದ್ಯಗಳ ಟೆಸ್ಟ್‌ ಸರಣಿ ಆಡಲು ಭಾರತ ಸೋಮವಾರ ವೆಸ್ಟ್‌ ಇಂಡೀಸ್‌ಗೆ ಪ್ರಯಾಣ ಬೆಳೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT