ಭಾರತ ಕ್ರಿಕೆಟ್‌ ತಂಡಕ್ಕೆ ಕೇಸರಿ ಜೆರ್ಸಿ! 
ಕ್ರಿಕೆಟ್

ಭಾರತ ಕ್ರಿಕೆಟ್‌ ತಂಡಕ್ಕೆ ಕೇಸರಿ ಜೆರ್ಸಿ!

ಪ್ರಸಕ್ತ ಆವೃತ್ತಿಯ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದ ಭಾರತ ತಂಡ ಕೇಸರಿ ಬಣ್ಣದ ಜೆರ್ಸಿ ಧರಿಸಿ ಪಂದ್ಯವನ್ನಾಡಲಿದೆ ಎಂಬುದು ಅಧಿಕೃತವಾಗಿ ಸ್ಪಷ್ಟವಾಗಿದೆ.

ನವದೆಹಲಿ: ಪ್ರಸಕ್ತ ಆವೃತ್ತಿಯ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದ ಭಾರತ ತಂಡ ಕೇಸರಿ ಬಣ್ಣದ ಜೆರ್ಸಿ ಧರಿಸಿ ಪಂದ್ಯವನ್ನಾಡಲಿದೆ ಎಂಬುದು ಅಧಿಕೃತವಾಗಿ ಸ್ಪಷ್ಟವಾಗಿದೆ. 
ಇದಕ್ಕೂ ಮುನ್ನ ಈ ಸುದ್ದಿ ಕ್ರಿಕೆಟ್ ವಲಯದಲ್ಲಿ ಹರಿದಾಡಿತ್ತು. ಕ್ರಿಕೆಟ್ ಪ್ರೇಮಿಗಳೂ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸುದ್ದಿ ಹಬ್ಬಿಸಿದ್ದರು. ಆದರೆ, ಟೀಮ್ ಇಂಡಿಯಾ ಈ ವಿಶ್ವಕಪ್‌ನಲ್ಲಿ ಕೇಸರಿ ಬಣ್ಣದ ಜೆರ್ಸಿ ಧರಿಸಿ ಮೈದಾನಕ್ಕಿಳಿಯುವ ವಿಚಾರ ಇದೀಗ ಅಧಿಕೃತವಾಗಿದೆ. 
ಇಂಡೋ ಏಷ್ಯನ್ ನ್ಯೂಸ್ ಸರ್ವೀಸಸ್ (ಐಎಎನ್‌ಎಸ್) ಇತ್ತೀಚಿನ ವರದಿಯಲ್ಲಿ ಈ ಕುರಿತು ತಿಳಿಸಿದೆ. ಐಎಎನ್‌ಎಸ್ ಪ್ರಕಟಿಸಿರುವ ಸುದ್ದಿಯ ಪ್ರಕಾರ ಈ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಧರಿಸಲಿರುವ ಬದಲಿ ಜೆರ್ಸಿ ಗಾಢ ಕೇಸರಿ ಬಣ್ಣದಿಂದ ಕೂಡಿದ್ದು, ಮುಂಭಾಗ ಮತ್ತು ಹಿಂಭಾಗದಲ್ಲಿನ ಪ್ರಿಂಟ್‌ ಗಾಢ ನೀಲಿ ಬಣ್ಣದಲ್ಲಿ ಇರಲಿದೆ. 
ಭಾರತ ತಂಡ ಈ ನೂತನ ಜೆರ್ಸಿಯನ್ನು ವಿಶ್ವಕಪ್‌ನ ಎರಡು ಪಂದ್ಯಗಳಿಗೆ ಮಾತ್ರ ಧರಿಸಲಿದೆ. ಜೂನ್ 22ರಂದು ಅಫ್ಘಾನಿಸ್ತಾನ ವಿರುದ್ಧ ಮತ್ತು ಜೂನ್ 30ರಂದು ಇಂಗ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಬಳಗ ಕೇಸರಿ ಬಣ್ಣದ ಜೆರ್ಸಿಯೊಂದಿಗೆ ಮಿಂಚಲಿದೆ. ಜುಲೈ 6ರಂದು ಶ್ರೀಲಂಕಾ ಸವಾಲು ಸ್ವೀಕರಿಸುವ ಭಾರತ, ಆ ದಿನದಿಂದ ಮತ್ತೆಲ್ಲಾ ಪಂದ್ಯಗಳಿಗೂ ಮಾಮೂಲಿ ನೀಲಿ ಜೆರ್ಸಿ ತೊಡಲಿದೆ.
ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಹೊಸ ನಿಯಮದ ಪ್ರಕಾರ ವಿಶ್ವಕಪ್‌ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ಎರಡು ರೀತಿಯ ಜೆರ್ಸಿ ಧರಿಸಲೇಬೇಕು. ಹೀಗಾಗಿ ಎಲ್ಲಾ 9 ತಂಡಗಳು ಬದಲಿ ಜೆರ್ಸಿಗಳೊಂದಿಗೆ ಮೈದಾನಕ್ಕಿಳಿಯಲಿವೆ. ಪಾಕಿಸ್ತಾನ ತಂಡ ಮಾತ್ರ ಎಂದಿನ ಸಾಂಪ್ರದಾಯಿಕ ಜೆರ್ಸಿಯನ್ನೇ ಟೂರ್ನಿಯುದ್ಧಕ್ಕೂ ಧರಿಸಲು ಅನುಮತಿ ಪಡೆದುಕೊಂಡಿದೆ. 
ಐಸಿಸಿ ನಿಯಮಗಳ ಪ್ರಕಾರ ಐಸಿಸಿ ವಿಶ್ವಕಪ್ ನ್ನು ಯಾವ ದೇಶ ಆಯೋಜಿಸುತ್ತದೆಯೋ ಆ ದೇಶದ ತಂಡಕ್ಕೆ ಯಾವುದೇ ಬಣ್ಣದ ಜೆರ್ಸಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದೆ. ಈಗಾಗಲೇ ಇಂಗ್ಲೆಂಡ್ ನೀಲಿ ಬಣ್ಣದ ಜೆರ್ಸಿಯನ್ನು ಆಯ್ಕೆ ಮಾಡಿಕೊಂಡಿದ್ದು, ಭಾರತ ಇದಕ್ಕಿಂತ ಭಿನ್ನವಾಗಿರುವ ಬಣ್ಣದ ಜೆರ್ಸಿಯನ್ನು ಆಯ್ಕೆ ಮಾಡಿಕೊಳ್ಳಬೇಕಿತ್ತು. ಈ ಹಿನ್ನೆಲೆಯಲ್ಲಿ ಕೇಸರಿ ಜೆರ್ಸಿಯನ್ನು ಆಯ್ಕೆ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Madras ನಿರ್ದೇಶಕ ಕಾಮಕೋಟಿ 'ಗೋಮೂತ್ರ ತಜ್ಞ': ಪ್ರಿಯಾಂಕಾ ಗಾಂಧಿ ಹೇಳಿಕೆ ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ಪತ್ರ

ಚೆನ್ನಮ್ಮ ಉತ್ತರ ಕ್ರಿಯಾದಿ: ಸಮಾಧಿ ಮುಂದೆ ಪತ್ನಿ ನೆನೆದು ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಧರ್ಮಸ್ಥಳ: ಬಂಗ್ಲೆಗುಡ್ಡೆಯಲ್ಲಿ ಅಸ್ಥಿಪಂಜರ ಪ್ರಕರಣ; ಮೂವರ DNA ಹೊಂದಾಣಿಕೆ ದೃಢ- FSL ವರದಿ

ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ

ಕಣಕಣದಲ್ಲೂ ಸಮಾಜಘಾತುಕತನ; ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ? ಪ್ರಿಯಾಂಕ್ ಖರ್ಗೆ