ಆ್ಯಡಂ ಝಂಪಾ 
ಕ್ರಿಕೆಟ್

ಚೆಂಡು ವಿರೂಪದ ಶಂಕೆ: ಪ್ರತಿ ಪಂದ್ಯದಲ್ಲೂ ಝಂಪಾ ಹ್ಯಾಂಡ್‌-ವಾರ್ಮರ್ಸ್‌ ಬಳಸುತ್ತಾರೆ- ಫಿಂಚ್‌

ಭಾರತದ ವಿರುದ್ಧ ಐಸಿಸಿ ವಿಶ್ವಕಪ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಸ್ಪಿನ್ನರ್‌ ಆ್ಯಡಂ ಝಂಪಾ ಚೆಂಡು ವಿರೂಪ ಮಾಡಿದ್ದರೆಂಬ ಅನುಮಾನ ವ್ಯಕ್ತವಾಗಿತ್ತು. ಇದಕ್ಕೆ ಆಸೀಸ್‌ ನಾಯಕ ಆ್ಯರೋನ್‌ ಫಿಂಚ್ ಸ್ಪಷ್ಟನೆ ನೀಡಿದ್ದಾರೆ.

ಲಂಡನ್: ಭಾರತದ ವಿರುದ್ಧ ಐಸಿಸಿ ವಿಶ್ವಕಪ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಸ್ಪಿನ್ನರ್‌ ಆ್ಯಡಂ ಝಂಪಾ ಚೆಂಡು ವಿರೂಪ ಮಾಡಿದ್ದರೆಂಬ ಅನುಮಾನ ವ್ಯಕ್ತವಾಗಿತ್ತು. ಇದಕ್ಕೆ ಆಸೀಸ್‌ ನಾಯಕ ಆ್ಯರೋನ್‌ ಫಿಂಚ್  ಸ್ಪಷ್ಟನೆ ನೀಡಿದ್ದಾರೆ. 
ಭಾನುವಾರ ಇಲ್ಲಿನ ದಿ ಓವಲ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಐಸಿಸಿ ವಿಶ್ವಕಪ್‌ ಟೂರ್ನಿಯ 14 ಪಂದ್ಯದಲ್ಲಿ ಕ್ಷೇತ್ರ ರಕ್ಷಣೆ ವೇಳೆ ಆ್ಯಡಂ ಝಂಪಾ  ಪದೇ-ಪದೇ ಜೇಬಿನಲ್ಲಿ ಕೈಇಟ್ಟು ಚೆಂಡನ್ನು ಉಜ್ಜುತ್ತಿದ್ದರು. ಇದು ಚೆಂಡು ವಿರೂಪಗೊಳಿಸುತ್ತಿದ್ದಾರೆಂಬ ಅನುಮಾನ ಕಾಡಿತ್ತು. 
ಈ ಬಗ್ಗೆ ಪ್ರತಿಕ್ರಿಯಿಸಿದ ಫಿಂಚ್‌, " ಕೆಲವು ಫೋಟೊಗಳಲ್ಲಿ ಈ ಕುರಿತು ನೋಡಿದ್ದೆ. ಆ್ಯಡಂ ಝಂಪಾ ಅವರು ಸಾಮಾನ್ಯವಾಗಿ ಪ್ರತಿಯೊಂದು ಪಂದ್ಯದಲ್ಲೂ ತಮ್ಮ ಜೇಬಿನಲ್ಲಿ ಹ್ಯಾಂಡ್‌-ವಾರ್ಮರ್ಸ್‌ ಇಟ್ಟುಕೊಂಡಿರುತ್ತಾರೆ. ಇದನ್ನು ನಾನೇ ನೋಡಿದ್ದೇನೆ. ಇದರ ಬಗ್ಗೆ ಹೆಚ್ಚು ಮಾತನಾಡಲ್ಲ. ಏಕೆಂದರೆ ಅವರು ಹ್ಯಾಂಡ್‌ ವಾರ್ಮರ್ಸ್‌ ಬಳಸುತ್ತಾರೆಂದು ನನಗೆ ಗೊತ್ತಿದೆ. 
ಮೈದಾನದಲ್ಲಿಯೂ ತೀರ್ಪುಗಾರರು ಇದರ ಬಗ್ಗೆ ಪ್ರಶ್ನಿಸಿಲ್ಲ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ಬಗ್ಗೆ ಝಂಪಾ ಅವರನ್ನು ಪ್ರಶ್ನಿಸುತ್ತಿದ್ದಾರೆ. 
ಚೆಂಡು ವಿರೂಪ ಪ್ರಕರಣದಿಂದಾಗಿ ಡೇವಿಡ್‌ ವಾರ್ನರ್‌ ಹಾಗೂ ಸ್ಟೀವನ್‌ ಸ್ಮಿತ್‌ ಒಂದು ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಇದೀಗ ಅವರು ಒಂದು ವರ್ಷದ ಬಳಿಕ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಭಾನುವಾರ ನಡೆದಿದ್ದ ಭಾರತದ ವಿರುದ್ಧದ ಪಂದ್ಯದಲ್ಲಿ ಸ್ಟೀವ್‌ ಸ್ಮಿತ್‌ ಅವರನ್ನು ಅಭಿಮಾನಿಗಳು ಚೀಟರ್ , ಚೀಟರ್‌ ಎಂದು ನಿಂದಿಸಿದ್ದರು. ಈ ವೇಳೆ ವಿರಾಟ್‌ ಕೊಹ್ಲಿ ಮಧ್ಯೆ ಪ್ರವೇಶಿಸಿ ಸ್ಮಿತ್‌ಗೆ ಬೆಂಬಲವಾಗಿ ನಿಂತರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT