ಭಾರತ್ ಚಿತ್ರ ವೀಕ್ಷಿಸಿದ ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ವಿಶ್ವಕಪ್ ಟೂರ್ನಿ ನಡುವೆ ಬ್ರೇಕ್ ತೆಗೆದುಕೊಂಡು ಭಾರತ್ ಸಿನಿಮಾ ವೀಕ್ಷಿಸಿದ ಟೀಂ ಇಂಡಿಯಾ

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಸತತ 2 ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಆಟಗಾರರು ಇದೀಗ ಕ್ರಿಕೆಟ್ ನಿಂದ ಕೊಂಚ ಬ್ರೇಕ್ ಪಡೆದು ನಾಟಿಂಗ್ ಹ್ಯಾಮ್ ನಲ್ಲಿ ನಟ ಸಲ್ಮಾನ್ ಖಾನ್ ಅಭಿನಯದ ಭಾರತ್ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ನಾಟಿಂಗ್ ಹ್ಯಾಮ್: ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಸತತ 2 ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಆಟಗಾರರು ಇದೀಗ ಕ್ರಿಕೆಟ್ ನಿಂದ ಕೊಂಚ ಬ್ರೇಕ್ ಪಡೆದು ನಾಟಿಂಗ್ ಹ್ಯಾಮ್ ನಲ್ಲಿ ನಟ ಸಲ್ಮಾನ್ ಖಾನ್ ಅಭಿನಯದ ಭಾರತ್ ಸಿನಿಮಾ ವೀಕ್ಷಣೆ ಮಾಡಿದ್ದಾರೆ.
ವಿಶ್ವಕಪ್ 2019 ಟೂರ್ನಿಯ ನಿರಂತರ ಪಂದ್ಯಗಳ ನಡುವೆಯೂ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾದ ಮಹೇಂದ್ರ ಸಿಂಗ್ ಧೋನಿ, ಗಾಯಾಳು ಶಿಖರ್ ಧವನ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಕೇದಾರ್ ಜಾದವ್ ಸಿನಿಮಾ ವೀಕ್ಷಣೆ ಮಾಡಿದ್ದಾರೆ. 
ಸಿನಿಮಾ ವೀಕ್ಷಣೆ ಬಳಿಕ ಕೇದಾರ್ ಜಾಧವ್ ಟ್ವಿಟರ್ ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದು, 'ಭಾರತ್ ಕಿ ಟೀಮ್, ಭಾರತ್ ಮೂವಿ ಕೆ ಬಾದ್"(ಭಾರತ ತಂಡ, 'ಭಾರತ್' ಸಿನಿಮಾ ನಂತರ) ಎಂದು ಶೀರ್ಷಿಕೆ ನೀಡಿದ್ದಾರೆ. ಇನ್ನು ಈ ಫೋಟೋಗೆ ಸಲ್ಮಾನ್ ಖಾನ್ ಲೈಕ್ ಮಾಡಿದ್ದು, ಭಾರತ್ ಸಿನಿಮಾ ವೀಕ್ಷಿಸಿದ್ದಕ್ಕೆ ಟೀಮ್ ಇಂಡಿಯಾಗೆ ಧನ್ಯವಾದ ಎಂದು ಹೇಳಿದ್ದಾರೆ.
ವಿಶ್ವಕಪ್ 2019ರ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿದ್ದ ಭಾರತ ತಂಡ ಎರಡನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾದ ವಿರುದ್ಧವೂ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯವನ್ನು ನಾಳೆ ನಾಟಿಂಗ್​ಹ್ಯಾಂನಲ್ಲಿ ನ್ಯೂಜಿಲ್ಯೆಂಡ್​ ವಿರುದ್ಧ ಆಡಲಿದೆ. ಪ್ರಸ್ತುತ ಟೂರ್ನಿಯಲ್ಲಿ 3 ಪಂದ್ಯಗಳನ್ನಾಡಿರುವ ಮೂರು ಪಂದ್ಯಗಳನ್ನು ಗೆದ್ದು ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಿಯಾಗಿದೆ.
ಸಲ್ಮಾನ್ ಖಾನ್​ ಹಾಗೂ ಕತ್ರೀನಾ ಕೈಫ್​ ಅಭಿನಯದ ಈ ಸಿನಿಮಾ ಕಳೆದ ವಾರ ರಂಜಾನ್​ ಹಬ್ಬದಂದು ಬಿಡುಗಡೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ