ಸಂಗ್ರಹ ಚಿತ್ರ 
ಕ್ರಿಕೆಟ್

ಕೈ ಬೆರಳು ಮುರಿದಿದ್ದರೂ, ಧವನ್ ತಂಡ ತೊರೆಯುವಂತಿಲ್ಲ; ಅಚ್ಚರಿಗೆ ಮೂಡಿಸಿದ ಬಿಸಿಸಿಐ ನಡೆ

ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡು ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿರುವ ಶಿಖರ್ ಧವನ್ ತಂಡ ತೊರೆಯುವಂತಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಚ್ಚರಿ ಹೇಳಿಕೆ ನೀಡಿದೆ.

ಲಂಡನ್: ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡು ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿರುವ ಶಿಖರ್ ಧವನ್ ತಂಡ ತೊರೆಯುವಂತಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಚ್ಚರಿ ಹೇಳಿಕೆ ನೀಡಿದೆ. 
ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಂಭೀರ ಗಾಯ ಮಾಡಿಕೊಂಡಿರುವ ತಂಡದ ಆರಂಭಿಕ ಆಟಗಾರ ಶಿಖರ್ ಸದ್ಯಕ್ಕೆ ತಂಡ ತೊರೆಯುವಂತಿಲ್ಲ ಎಂದು ಬಿಸಿಸಿಐ ಹೇಳಿದ್ದು, ಪರ್ಯಾಯ ಆಟಗಾರನ ಆಯ್ಕೆ ಸದ್ಯಕ್ಕಿಲ್ಲ ಎಂದು ಹೇಳಿದೆ.
ಈ  ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ, ಗಾಯಾಳು ಧವನ್ ತಂಡದೊಂದಿಗೆ ಇರಲಿದ್ದಾರೆ. ತಂಡದ ಫಿಸಿಯೋಗಳ ಸಲಹೆ ಮೇರೆಗೆ ಶಿಖರ್ ಧವನ್ ರನ್ನು ಕೆಲ ದಿನಗಳ ಕಾಲ ವೀಕ್ಷಣೆಯಲ್ಲಿಡಲಾಗುತ್ತದೆ. ಹೀಗಾಗಿ ಸದ್ಯಕ್ಕೆ ಬದಲಿ ಆಟಗಾರನ ಆಯ್ಕೆ ಇಲ್ಲ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಇನ್ನು ಧವನ್ ಗಾಯಗೊಂಡಿರುವುದರಿಂದ ಭಾರತದ ಮುಂದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದ್ದು, ನಾಲ್ಕನೇ ಕ್ರಮಾಂಕಕ್ಕೆ ಈ ವರೆಗೂ ಆಯ್ಕೆ ಪಕ್ಕಾ ಆಗಿಲ್ಲ. ಆದರೆ ಪಂದ್ಯಕ್ಕೆ ಕ್ಷಣಗಣನೆ ಇರುವಂತೆ ಆಟಗಾರರ ಮತ್ತು ಪಿಚ್ ಮರ್ಮ ಅರಿತು ನಾಲ್ಕನೇ ಕ್ರಮಾಂಕವನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ನಾಲ್ಕನೇ ಕ್ರಮಾಂಕಕ್ಕಾಗಿ ಶ್ರೇಯಶ್ ಅಯ್ಯರ್ ಮತ್ತು ದಿನೇಶ್ ಕಾರ್ತಿಕ್ ರನ್ನು ಸನ್ನದ್ದ ಸ್ಥಿತಿಯಲ್ಲಿರಿಸಲಾಗುತ್ತದೆ ಎಂದು ತಂಡದ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT