ಸಂಗ್ರಹ ಚಿತ್ರ 
ಕ್ರಿಕೆಟ್

ಶೀಘ್ರದಲ್ಲೇ ಶಿಖರ್ ಧವನ್ ತಂಡಕ್ಕೆ ವಾಪಸ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಆರಂಭಿಕ ಆಟಗಾರ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಶೀಘ್ರದಲ್ಲೇ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲಂಡನ್: ಟೀಂ ಇಂಡಿಯಾ ಆರಂಭಿಕ ಆಟಗಾರ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಶೀಘ್ರದಲ್ಲೇ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿನ್ನೆ ನ್ಯೂಜಿಲೆಂಡ್ ವಿರುದ್ಧ ಪಂದ್ಯ ಟಾಸ್ ಕೂಡ ಕಾಣದೇ ಮಳೆಗೆ ಆಹುತಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರಾಟ್ ಕೊಹ್ಲಿ, ಶಿಖರ್ ಧವನ್ ಕುರಿತಂತೆ ಮಾಹಿತಿ ನೀಡಿದರು. ಶಿಖರ್ ಧವನ್ ಇನ್ನೂ ಕೆಲ ವಾರಗಳ ಕಾಲ ಪ್ಲಾಸ್ಟರ್ ಹಾಕಿಕೊಂಡೇ ಇರಬೇಕಾಗುತ್ತದೆ. ಆದರೆ ಸಮಾಧಾನದ ವಿಚಾರವೆಂದರೆ ಆತ ಶೀಘ್ರ ಗುಣಮುಖನಾಗಲಿದ್ದು, ಟೂರ್ನಿಯ ಮಧ್ಯ ಭಾಗದಲ್ಲಿ ತಂಡ ಸೇರಿಕೊಳ್ಳಬಹುದು ಎಂದು ಹೇಳಿದ್ದಾರೆ.
ಧವನ್ ಬೇಗ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ತಂಡದ ಫಿಸಿಯೋ ಮತ್ತು ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟೂರ್ನಿಯ ಮಧ್ಯಭಾಗದಲ್ಲಿ ಆತ ತಂಡ ಸೇರಿಕೊಳ್ಳಬಹುದು. ಅಂತೆಯೇ ಸೆಮಿಫೈನಲ್ ವೇಳೆಗೆ ಆತ ಸಂಪೂರ್ಣ ಗುಣಮುಖನಾಗಿರಲಿದ್ದಾನೆ ಎಂಬ ವಿಶ್ವಾಸವಿದೆ ಎಂದು ಕೊಹ್ಲಿ ಹೇಳಿದ್ದಾರೆ.
ಇನ್ನು ಕಳೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಶಿಖರ್ ಧವನ್ ಅದೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಬೌಲಿಂಗ್ ನಲ್ಲಿ ಎಡಗೈ ಹೆಬ್ಬರಳಿಗೆ ಗಾಯ ಮಾಡಿಕೊಂಡಿದ್ದರು. ಪಂದ್ಯದ ಬಳಿಕ ವೈದ್ಯಕೀಯ ತಪಾಸಣೆ ನಡೆಸಿದ ವೈದ್ಯರು, ಧವನ್ ಎಡಗೈ ಹೆಬ್ಬರಳು ಮುರಿದಿರುವ ಕುರಿತು ಮಾಹಿತಿ ನೀಡಿದರು. ಅಲ್ಲದೆ ಕೆಲ ವಾರಗಳ ವಿಶ್ರಾಂತಿ ಅತ್ಯಗತ್ಯ ಎಂದು ಹೇಳಿದ್ದಾರೆ. ಹೀಗಾಗಿ ಧವನ್ ವಿಶ್ವಕಪ್ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಬಿಸಿಸಿಐ ಧವನ್ ಗೆ ತಂಡದ ಜೊತೆಯಲ್ಲಿಯೇ ಇರುವಂತೆ ಸೂಚನೆ ನೀಡಿದೆ.
ಇನ್ನು ಧವನ್ ಅಲಭ್ಯತೆಯಿಂದಾಗಿ ತೆರವಾಗಿರುವ ಆರಂಭಿಕ ಸ್ಥಾನಕ್ಕೆ ನಾಲ್ಕನೇ ಕ್ರಮಾಂಕದಲ್ಲಿ ಆಡುತ್ತಿದ್ದ ಕೆಎಲ್ ರಾಹುಲ್ ರನ್ನು ಅಂತಿಮಗೊಳಿಸಲಾಗಿದ್ದು, ನಾಲ್ಕನೇ ಕ್ರಮಾಂಕಕ್ಕಾಗಿ ಈ ವರೆಗೂ ಇನ್ನೂ ಯಾರನ್ನೂ ಅಂತಿಮಗೊಳಿಸಿಲ್ಲ, ಹೀಗಾಗಿ ನಾಲ್ಕನೇ ಕ್ರಮಾಂಕದ ರಹಸ್ಯ ಇನ್ನೂ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT