ಸಂಗ್ರಹ ಚಿತ್ರ 
ಕ್ರಿಕೆಟ್

ಶಿಖರ್ ಧವನ್ ಬೇಗ ಚೇತರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಶುಭ ಹಾರೈಕೆ

ಎಡಗೈ ಹೆಬ್ಬೆರಳಿನ ಗಾಯ ಗುಣವಾಗದಿರುವುದರಿಂದ ವಿಶ್ವಕಪ್ ಟೂರ್ನಿಯಲ್ಲಿ ತಂಡದಿಂದ ಹೊರಗುಳಿಯಬೇಕಾಗಿರುವ ಬಂದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ನವದೆಹಲಿ: ಎಡಗೈ ಹೆಬ್ಬೆರಳಿನ ಗಾಯ ಗುಣವಾಗದಿರುವುದರಿಂದ ವಿಶ್ವಕಪ್ ಟೂರ್ನಿಯಲ್ಲಿ ತಂಡದಿಂದ ಹೊರಗುಳಿಯಬೇಕಾಗಿರುವ ಬಂದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಪ್ರೀತಿಯಿ ಶಿಖರ್ ಧವನ್ , ಅನುಮಾನವೇ ಇಲ್ಲ. ಮೈದಾನ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದೆ. ಆದರೆ, ನೀವು ಬೇಗ ಚೇತರಿಸಿಕೊಳ್ಳುತ್ತೀರಾ ಎಂಬ ನಂಬಿಕೆಯಿದೆ. ನೀವು ಮತ್ತೆ ಮೈದಾನಕ್ಕೆ ಮರಳಿ ದೇಶ ಹೆಚ್ಚಿನ ಪಂದ್ಯ ಗೆಲಲ್ಲು ಕೊಡುಗೆ ನೀಡಿ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಶಿಖರ್ ದವನ್ ತಂಡದಿಂದ ಹೊರಗುಳಿದಿದ್ದು, ರಿಷಭ್ ಪಂತ್ ಅಧಿಕೃತವಾಗಿ ಧವನ್ ಜಾಗಕ್ಕೆ ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಗಾಯಗೊಂಡ ನಂತರ ರಿಷಭ್ ಪಂತ್ ಲಂಡನ್ ಗೆ ಹಾರಿದ್ದು, ಒಂದು ವಾರದಿಂದ ಅಲ್ಲಿಯೇ ಇದ್ದಾರೆ. 
2013ರ ಚಾಂಫಿಯನ್ಸ್ ಟ್ರೋಫಿ ಮತ್ತು 2015ರ ವಿಶ್ವಕಪ್ ಸೇರಿದಂತೆ ಕಳೆದ ಐದು ಬಹು ರಾಷ್ಟ್ರೀಯ ಟೂರ್ನಿಗಳಲ್ಲಿ ಧವನ್ ಅತಿ ಹೆಚ್ಚಿನ ರನ್ ಗಳಿಸಿರುವ ಆಟಗಾರರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2019 ಟೂರ್ನಿಯ ಪಂದ್ಯದಲ್ಲಿ ಎಡಗೈ ಹೆಬ್ಬೆರಳಿನ ಗಾಯದ ನಡುವೆಯೂ ಶತಕದಾಟದ ಮೂಲಕ ತಂಡ ಗೆಲ್ಲುವಲ್ಲಿ ಪ್ರಮುಖ ಕೊಡುಗೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT