ಸಂಗ್ರಹ ಚಿತ್ರ 
ಕ್ರಿಕೆಟ್

ಐಸಿಸಿ ವಿಶ್ವಕಪ್: ಧವನ್ ಸ್ಥಾನಕ್ಕೆ ರಿಷಬ್ ಪಂತ್ ಆಯ್ಕೆ, ಅನಗತ್ಯವಾಗಿ ಅಂಬಾಟಿ ರಾಯುಡು ಟ್ರೋಲ್ ಗೆ ಗುರಿ!

ಗಾಯಾಳು ಶಿಖರ್ ಧವನ್ ಹೊರಬಿದ್ದು, ಅವರ ಸ್ಥಾನಕ್ಕೆ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಆದರೆ ಈ ವಿಚಾರದಲ್ಲೂ ಮತ್ತೋರ್ವ ಟೀಂ ಇಂಡಿಯಾ ಆಟಗಾರ ಅಂಬಾಟಿ ರಾಯುಡುರನ್ನು ವ್ಯಾಪಕವಾಗಿ ಟ್ರೋಲ್ ಮಾಡಲಾಗುತ್ತಿದೆ.

ಲಂಡನ್: ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಿಂದ ಗಾಯಾಳು ಶಿಖರ್ ಧವನ್ ಹೊರಬಿದ್ದು, ಅವರ ಸ್ಥಾನಕ್ಕೆ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಆದರೆ ಈ ವಿಚಾರದಲ್ಲೂ ಮತ್ತೋರ್ವ ಟೀಂ ಇಂಡಿಯಾ ಆಟಗಾರ ಅಂಬಾಟಿ ರಾಯುಡುರನ್ನು ವ್ಯಾಪಕವಾಗಿ ಟ್ರೋಲ್ ಮಾಡಲಾಗುತ್ತಿದೆ.
ಅರೆ ರಾಯುಡು ವಿಶ್ವಕಪ್ ತಂಡಕ್ಕೆ ಆಯ್ಕೆಯೇ ಆಗಿಲ್ಲ, ಹೀಗಿದ್ದೂ ಅವರನ್ನೇಕೆ ಟ್ರೋಲ್ ಮಾಡಲಾಗುತ್ತಿದೆ ಎಂದು ನೀವು ಭಾವಿಸಿದ್ದರೆ, ಇದಕ್ಕೆ ಕಾರಣ ರಾಯುಡು ಈ ಹಿಂದೆ ಮಾಡಿದ್ದ ಟ್ವೀಟ್.. ಹೌದು.. ಈ ಹಿಂದೆ ಐಸಿಸಿಯ ಆಯ್ಕೆ ಸಮಿತಿ ವಿಶ್ವಕಪ್ ಆಟಗಾರರ ತಂಡ ಪ್ರಕಟಿಸಿತ್ತು. ಆದರೆ ಈ ವೇಳೆ ರಾಯುಡುರನ್ನು ಕೈ ಬಿಟ್ಟಿತ್ತು. ಇದಕ್ಕೆ ವ್ಯಂಗ್ಯಾತ್ಮಕವಾಗಿ ಟ್ವೀಟ್ ಮಾಡಿದ್ದ ರಾಯುಡು, 'ಈಗಷ್ಟೇ ವಿಶ್ವಕಪ್​ ಟೂರ್ನಿ ನೋಡೋದಕ್ಕೆ 3D ಗ್ಲಾಸ್( ಕನ್ನಡಕ) ಆರ್ಡರ್ ಮಾಡಿದ್ದೇನೆ ಎಂದು ಟ್ವೀಟ್​ ಮಾಡಿದ್ದರು. ಈ ಟ್ವೀಟ್ ವ್ಯಾಪಕ ವೈರಲ್ ಆಗಿತ್ತು. 
ಇದೀಗ ಶಿಖರ್ ಧವನ್ ಗಾಯಗೊಂಡು ಹೊರಗುಳಿದಿದ್ದು, ಅವರ ತಂಡಕ್ಕೆ ಅನುಭವಿ ರಾಯುಡುರನ್ನು ಆಯ್ಕೆ ಮಾಡದೇ ಅನನುಭವಿ ರಿಷಬ್ ಪಂತ್ ರನ್ನು ಆಯ್ಕೆ ಮಾಡಲಾಗಿದೆ. ಇದೇ ಕಾರಣಕ್ಕೆ ಟ್ವೀಟಿಗರು ಮತ್ತೆ ರಾಯುಡುರನ್ನು ಟ್ವಿಟರ್ ನಲ್ಲಿ ಟ್ರೋಲ್ ಗಳ ಮೂಲಕ ರೋಸ್ಟ್ ಮಾಡುತ್ತಿದ್ದಾರೆ. ಈ ಹಿಂದೆ ವಿಜಯ್ ಶಂಕರ್ ಆಯ್ಕೆಯಾದಾಗಲೂ ಕೂಡ ಇದೇ ರಾಯುಡುರನ್ನು ಟ್ರೋಲ್ ಮಾಡಲಾಗಿತ್ತು.
ಇನ್ನು ಭಾರತ ತನ್ನ ಮುಂದಿನ ಪಂದ್ಯವನ್ನು ನಾಳೆ ಅಂದರೆ ಜೂನ್ 22ರಂದು ಆಫ್ಘಾನಿಸ್ತಾನದ ವಿರುದ್ಧ ಆಡಲಿದ್ದು, ಸೌಥ್ಯಾಂಪ್ಟನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT