ಮೊದಲ ಏಕದಿನ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ 
ಕ್ರಿಕೆಟ್

ಮೊದಲ ಏಕದಿನ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಬಗೊಂಡಿದ್ದು ಶನಿವಾರ ನಡೆಯುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಹೈದರಾಬಾದ್: ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ  ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಬಗೊಂಡಿದ್ದು ಶನಿವಾರ ನಡೆಯುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಟೀಂ ಇಂಡಿಯಾದಲ್ಲಿ ಕೆ.ಎಲ್. ರಾಹುಲ್ ಬದಲು ಅಂಬಟಿ ರಾಯಡು ಸ್ಥಾನ ಗಳಿಸಿದ್ದಾರೆ. ರೋಹಿತ್ ಶರ್ಮಾ, ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ರವೀಂದ್ರ ಜಡೇಜಾ, ಕೇದಾರ್ ಜಾಧವ್, ವಿಜಯ್ ಶಂಕರ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೌಲಿಂಗ್ ವಿಭಾಗದ ಕುರಿತು ಹೇಳುವುದಾದರೆ ಚಹಾಲ್ ಅವರನ್ನು ಕೈಬಿಡಲಾಗಿದ್ದು ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಬುಮ್ರಾ ತಂಡದಲ್ಲಿದ್ದಾರೆ.
ಅಸೀಸ್ ತಂಡದಲ್ಲಿ ಆಶ್ಟನ್ ಟರ್ನರ್  ಚೊಚ್ಚಲ ಏಕದಿನ ಪಂದ್ಯವನ್ನಾಡುವ ಅವಕಾಶ ಗಳಿಸಿದ್ದಾರೆ.  ಜೇ ರಿಚರ್ಡ್ಸಸನ್ ಅವರ ಬದಲು  ಅಲೆಕ್ಸ್ ಕ್ಯಾರಿ  ತಂಡಕ್ಕೆ ಆಗಮಿಸಿದ್ದಾರೆ.
ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ  ಪಂದ್ಯ ಆಯೋಜನೆಯಾಗಿದೆ. ಟಿ20  ಸರಣಿ ಸೋಲುಂಡ ಟೀಂ ಇಂಡಿಯಾ ಏಕದಿನ ಸರಣಿ ಜಯಿಸಿ ಎದುರಾಳಿಗಳಿಗೆ ತಿರುಗೇಟು ನೀಡುವ ಇರಾದೆಯನ್ನು ಹೊಂದಿದೆ. ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭವಾಗುವ ವಿಶ್ವಕಪ್ ಪಂದ್ಯಾವಳಿಗೆ ಸಹ ಇದು ಅಂತಿಮ ತಯಾರಿ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT