ಕ್ರಿಕೆಟ್

ಧೋನಿ ತವರಿನಲ್ಲಿ ಏಕದಿನ ಸರಣಿ ಗೆಲುವಿನ ಕನಸು

Nagaraja AB

ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ ಭಾರತ ತಂಡ, ಶುಕ್ರವಾರ ಸರಣಿಯ ಮೂರನೇ ಪಂದ್ಯದಲ್ಲಿಯೂ  ಪ್ರವಾಸಿ ತಂಡವನ್ನು  ಕಾಡಲು ಸಜ್ಜಾಗಿದೆ. ಈಗಾಗಲೇ ಎರಡೂ ಏಕದಿನ ಪಂದ್ಯ ಗೆದ್ದಿರುವ ವಿರಾಟ್ ಪಡೆ, ಮೂರನೇ ಪಂದ್ಯ ಗೆದ್ದು ಸರಣಿ ಗೆಲುವು ಸಾಧಿಸುವ ಯೋಜನೆ ರೂಪಿಸಿಕೊಂಡಿದೆ.

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರಿನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ಕುತೂಹಲ ಮೂಡಿಸಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಬಲಾಢ್ಯವಾಗಿದ್ದು, ವಿರಾಟ್ ಪಡೆ ತವರಿನಲ್ಲಿ ಅಬ್ಬರದ ಪ್ರದರ್ಶನ ನೀಡುವ ಪ್ಲಾನ್ ಹಾಕಿಕೊಂಡಿದೆ.

ಆರಂಭಿಕ ಚಿಂತೆ

ಟೀಮ್ ಇಂಡಿಯಾ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ, ಆರಂಭಿಕ ಆಟಗಾರರು ಲಯಕ್ಕೆ ಮರಳದೇ ಇರುವುದು ತಂಡಕ್ಕೆ ತಲೆನೋವಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಸೊನ್ನೆ ಸುತ್ತಿದ್ದರೆ, ಶಿಖರ್ ಧವನ್ ದೊಡ್ಡ ಇನ್ನಿಂಗ್ಸ್ ಕಟ್ಟಲಿಲ್ಲ. ಇವರಿಬ್ಬರಲ್ಲಿ ಒಬ್ಬರಿಗೆ ವಿಶ್ರಾಂತಿ ನೀಡಿ ರಾಹುಲ್ ಗೆ ಅವಕಾಶ ನೀಡಿದರೆ ಉತ್ತಮ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಸಂಭಾವ್ಯ ತಂಡ:-
ಭಾರತ
ಆಸ್ಟ್ರೇಲಿಯಾ
ಸಮಯ
SCROLL FOR NEXT