ಸಂಗ್ರಹ ಚಿತ್ರ 
ಕ್ರಿಕೆಟ್

ಎ-ಪ್ಲಸ್ ಶ್ರೇಣಿಯಲ್ಲಿ ಪೂಜಾರ ಹೆಸರು ಸೇರಿಸಬೇಕಿತ್ತು; ನಿರಂಜನ್ ಶಾ

ಕ್ರಿಕೆಟಿಗರ ವೇತನ ಒಪ್ಪಂದ ಪರಿಷ್ಕರಣೆ ಮಾಡಿರುವ ಬಿಸಿಸಿಐ ನಿರ್ಧಾರ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಎ-ಪ್ಲಸ್ ಶ್ರೇಣಿಗೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಅವರನ್ನು ಸೇರಿಸಬೇಕಿತ್ತು ಎಂದು ಮಾಜಿ ಬಿಸಿಸಿಐ ಕಾರ್ಯದರ್ಶಿ ನಿರಂಜನ್ ಶಾ ಹೇಳಿದ್ದಾರೆ.

ನವದೆಹಲಿ: ಕ್ರಿಕೆಟಿಗರ ವೇತನ ಒಪ್ಪಂದ ಪರಿಷ್ಕರಣೆ ಮಾಡಿರುವ ಬಿಸಿಸಿಐ ನಿರ್ಧಾರ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಎ-ಪ್ಲಸ್ ಶ್ರೇಣಿಗೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಅವರನ್ನು ಸೇರಿಸಬೇಕಿತ್ತು ಎಂದು ಮಾಜಿ ಬಿಸಿಸಿಐ ಕಾರ್ಯದರ್ಶಿ ನಿರಂಜನ್ ಶಾ ಹೇಳಿದ್ದಾರೆ.

ನಿನ್ನೆಯಷ್ಟೇ ಬಿಸಿಸಿಐ ಜಸ್ ಪ್ರೀತ್ ಬುಮ್ರಾ ರನ್ನು ಎ ಪ್ಲಸ್ ಶ್ರೇಣಿಯ ಆಟಗಾರರ ಪಟ್ಟಿಗೆ ಸೇರಿಸಿ ಕ್ರಿಕೆಟಿಗ ವೇತನ ಒಪ್ಪಂದವನ್ನು ಪರಿಷ್ಕರಣೆ ಮಾಡಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಿರಂಜನ್ ಶಾ, ಇತ್ತೀಚಿಗೆ ಮುಕ್ತಾಯವಾದ ಆಸ್ಟ್ರೇಲಿಯಾ ಪ್ರವಾಸದ ಟೆಸ್ಟ್ ಸರಣಿಯಲ್ಲಿ ಚೇತೇಶ್ವರ ಪೂಜಾರರಷ್ಟು ಯಶಸ್ವೀ ಆಟಗಾರ ಮತ್ತೊಬನಿಲ್ಲ. ಪೂಜಾರ ನಿಜಕ್ಕೂ ಎಪ್ಲಸ್ ಶ್ರೇಣಿಗೆ ಸೇರಬೇಕಾದ ಆಟಗಾರ. ಆಸಿಸ್ ಪ್ರವಾಸದಲ್ಲಿ ಪೂಜಾರ ಯಶಸ್ವೀ ಬ್ಯಾಟ್ಸಮನ್ ಆಗಿದ್ದರು. ಇಡೀ ಸರಣಿಯಲ್ಲಿ ಪೂಜಾರ 1,258 ಎಸೆತಗಳನ್ನು ಎದುರಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಇದೊಂದು ದಾಖಲೆಯಾಗಿದೆ. ಹೀಗಿರುವಾಗ ಪೂಜಾರ ಅವರಿಗೆ ಮನ್ನಣೆ ನೀಡಿದಿರುವುದು ಬೇಸರ ತಂದಿದೆ ಎಂದು ಶಾ ಹೇಳಿದ್ದಾರೆ.

ಅಂತೆಯೇ ಬಿಸಿಸಿಐ ಟೆಸ್ಟ್ ಕ್ರಿಕೆಟ್ ಕುರಿತಂತೆ ನಿರ್ಲಕ್ಷ ಧೋರಣೆ ತೋರುತ್ತಿದ್ದು, ಟೆಸ್ಟ್ ಆಟಗಾರರಿಗೆ ಮನ್ನಣೆ ನೀಡುತ್ತಿಲ್ಲ ಎಂದೂ ಶಾ ಆರೋಪಿಸಿದ್ದಾರೆ. 

ಇನ್ನು ಚೇತೇಶ್ವರ ಪೂಜಾರ ಪ್ರಸ್ತುತ ಎ ಶ್ರೇಣಿಯ ಆಟಗಾರರ ಪಟ್ಟಿಯಲ್ಲಿದ್ದು, ವಾರ್ಷಿಕ 5 ಕೋಟಿ ವೇತನ ಪಡೆಯುತ್ತಿದ್ದಾರೆ. ಎಪ್ಲಸ್ ಶ್ರೇಣಿಯಲ್ಲಿನ ಆಟಗಾರರಿಗೆ ವಾರ್ಷಿಕ 7 ಕೋಟಿ ವೇತನ ನೀಡಲಾಗುತ್ತಿದೆ. ಈ ಪಟ್ಟಿಯಲ್ಲಿ ಪ್ರಸ್ತುತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇದ್ದು, ನಿನ್ನೆಯಷ್ಟೇ ಜಸ್ ಪ್ರೀತ್ ಬುಮ್ರಾ ಈ ಪಟ್ಟಿಗೆ ನೂತನವಾಗಿ ಸೇರ್ಪಡೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?

IPL 2026: DC ಸೋಲಿಸಿ ತಮ್ಮ 5ನೇ ಗೆಲುವು ದಾಖಲಿಸಿದ CSK; ದಾಖಲೆ ಸೃಷ್ಟಿ!

ಬೆಂಬಲ ನೀಡುವಂತೆ ವಿಜಯ್ ಮನವಿ: ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾಂಗ್ರೆಸ್‌ಗೆ ಬಿಟ್ಟಿದ್ದೇವೆ: ಕೆಸಿ ವೇಣುಗೋಪಾಲ್

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 33 ರಿಂದ 37ಕ್ಕೆ ಹೆಚ್ಚಳ: ಪ್ರಧಾನಿ ಮೋದಿ ಸಂಪುಟ ಅನುಮೋದನೆ!

ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ; ಕ್ವಿಂಟಾಲ್ ಗೆ ₹365 FRP ಹೆಚ್ಚಿಸಲು ಅನುಮೋದನೆ!

SCROLL FOR NEXT