ರಾಂಚಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಕೊನೆ ಎರಡು ಪಂದ್ಯಗಳಿಗೆ ಎಂಎಸ್ ಧೋನಿಗೆ ವಿಶ್ರಾಂತಿ ಸಿಗಲಿದ್ದು ಅವರ ಜಾಗವನ್ನು ಯುವ ವಿಕೆಟ್ ಕೀಪರ್ ರಿಷಬ್ ಪಂತ್ ತುಂಬಲಿದ್ದಾರೆ.
ಈ ಕುರಿತು ಮಾತನಾಡಿದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್, ಮುಂದಿನ ಪಂದ್ಯಗಳಲ್ಲಿ ಖಂಡಿತವಾಗಿ ನಾವು ಕೆಲ ಬದಲಾವಣೆ ಮಾಡಲಿದ್ದೇವೆ. ವಿಶ್ವಕಪ್ ದೃಷ್ಠಿಯಿಂದ ಧೋನಿ ವಿಶ್ರಾಂತಿ ಪಡೆದುಕೊಳ್ಳಿದ್ದು, ಅವರ ಸ್ಥಾನವನ್ನು ಉದಯೋನ್ಮುಖ ವಿಕೆಟ್ ಕೀಪರ್ ರಿಷಬ್ ಪಂತ್ ತುಂಬಲಿದ್ದಾರೆ.
ಮೂರನೇ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಸಣ್ಣ ಪ್ರಮಾಣದ ಗಾಯದ ಸಮಸ್ಯೆ ಎದುರಿಸುತ್ತಿದ್ದು ಅವರು ಒಂದು ವೇಳೆ ಫಿಟ್ ಆಗದ್ದಿದ್ದರೆ ಅವರ ಸ್ಥಾನಕ್ಕೆ ಭುವನೇಶ್ವರ್ ಕುಮಾರ್ ಸೇರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ 4ನೇ ಹಾಗೂ 5ನೇ ಏಕದಿನ ಪಂದ್ಯ ಕ್ರಮವಾಗಿ ಮೊಹಾಲಿ ಹಾಗೂ ದೆಹಲಿಯಲ್ಲಿ ನಡೆಯಲಿದೆ. ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಿಂದ ಭಾರತ ಮುನ್ನಡೆ ಸಾಧಿಸಿದೆ.