ರವಿಶಾಸ್ತ್ರಿ 
ಕ್ರಿಕೆಟ್

ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಕಾಂಟ್ರ್ಯಾಕ್ಟ್ ವಿಸ್ತರಣೆ ಷರತ್ತು ಇಲ್ಲ: ಬಿಸಿಸಿಐ

2019ರ ಏಕದಿನ ವಿಶ್ವಕಪ್ ವರೆಗೂ ಟೀಂ ಇಂಡಿಯಾ ಕ್ರಿಕೆಟ್ ತಂಡದ ಹಾಲಿ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಇರಲಿದ್ದು ಆ ಬಳಿಕ ಗುತ್ತಿಗೆ ವಿಸ್ತರಣೆ ಇಲ್ಲ ಎಂದ ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: 2019ರ ಏಕದಿನ ವಿಶ್ವಕಪ್ ವರೆಗೂ ಟೀಂ ಇಂಡಿಯಾ ಕ್ರಿಕೆಟ್ ತಂಡದ ಹಾಲಿ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಇರಲಿದ್ದು ಆ ಬಳಿಕ ಗುತ್ತಿಗೆ ವಿಸ್ತರಣೆ ಷರತ್ತು ಇಲ್ಲ ಎಂದ ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.
ಗುತ್ತಿಗೆ ಅವಧಿ ಮುಕ್ತಾಯದ ಬಳಿಕ ಮತ್ತೆ ಕೋಚ್ ಆಗಿ ಮುಂದುವರೆಯ ಬೇಕಿದ್ದರೆ ರವಿಶಾಸ್ತ್ರಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ಗುತ್ತಿಗೆ ಅವಧಿಯನ್ನು ವಿಸ್ತರಿಸುವ ಬಗ್ಗೆ ಹಳೆಯ ಒಪ್ಪಂದದಲ್ಲಿ ಉಲ್ಲೇಖಿಸಲಾಗಿಲ್ಲ. ಹೀಗಾಗಿ ಕೋಚ್ ನೇಮಕ ಪ್ರಕ್ರಿಯೆಯನ್ನು ಬಿಸಿಸಿಐ ಹೊಸದಾಗಿ ನಡೆಸಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ವಿಶ್ವಕಪ್ ಮುಕ್ತಾಯಗೊಳ್ಳುತ್ತಿದ್ದಂತೆ ಶಾಸ್ತ್ರಿ ಹಾಗೂ ತಂಡದ ಇನ್ನಿತರ ಕೋಚ್ ಗಳ ಗುತ್ತಿಗೆ ಅವಧಿ ಪೂರ್ಣಗೊಳ್ಳಲಿದೆ. ಬಿಸಿಸಿಐ ಕೋಚ್ ಹುದ್ದೆಗೆ ಹೊಸದಾಗಿ ಜಾಹೀರಾತು ನೀಡಿ, ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಸಂದರ್ಶನ ನಡೆಸಬೇಕಿದೆ. ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಅದಕ್ಕೂ ಮುನ್ನ ಕೋಚ್ ನೇಮಕ ನಡೆಯಲಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!