ಮುಂದಿನ ಸಲ ಕಪ್ ನಮ್ದೇ! ಈ ಬಾರಿಮಳೆಯಲ್ಲಿ ಕೊಚ್ಚಿಹೋದ ಆರ್ ಸಿಬಿ ಪ್ಲೇ ಆಫ್ ಕನಸು! 
ಕ್ರಿಕೆಟ್

ಮುಂದಿನ ಸಲ ಕಪ್ ನಮ್ದೇ! ಈ ಬಾರಿಮಳೆಯಲ್ಲಿ ಕೊಚ್ಚಿಹೋದ ಆರ್ ಸಿಬಿ ಪ್ಲೇ ಆಫ್ ಕನಸು!

ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ತಂಡದ ಇತ್ತೀಚಿನ ಗೆಲುವುಗಳಿಂದ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿತ್ತು. ಆದರೆ ಮೇ.30 ರಂದು ನಡೆದ ಪಂದ್ಯದಲ್ಲಿ ಮಳೆ ನೀರಿನಲ್ಲಿ ಆರ್ ಸಿಬಿ ಪ್ಲೇ ಆಫ್ ಕನಸು ಕೊಚ್ಚಿಹೋಯಿತು.

ಬೆಂಗಳೂರು: ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ತಂಡದ ಇತ್ತೀಚಿನ ಗೆಲುವುಗಳಿಂದ ಪ್ಲೇ ಆಫ್ ಕನಸನ್ನು  ಜೀವಂತವಾಗಿರಿಸಿಕೊಂಡಿತ್ತು. ಆದರೆ ಮೇ.30 ರಂದು ನಡೆದ ಪಂದ್ಯದಲ್ಲಿ ಮಳೆ ನೀರಿನಲ್ಲಿ ಆರ್ ಸಿಬಿ ಪ್ಲೇ ಆಫ್ ಕನಸು ಕೊಚ್ಚಿಹೋಯಿತು. 
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ-ಆರ್ ಆರ್ ನಡುವಿನ ಪಂದ್ಯ ಮಳೆಯ ಕಾರಣದಿಂದಾಗಿ ತಲಾ 5 ಓವರ್ ಗಳಿಗೆ ಇಳಿಕೆ  ಮಾಡಲಾಯಿತು. ನಿಗದಿತ 5 ಓವರ್ ಗಳಲ್ಲಿ ಆರ್ ಸಿಬಿ 7 ವಿಕೆಟ್ ಕಳೆದುಕೊಂಡು ಎದುರಾಳಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ 63 ರನ್ ಗಳ ಟಾರ್ಗೆಟ್ ನೀಡಿತ್ತು. ಆರ್ ಸಿಬಿ ಟಾರ್ಗೆಟ್ ನ್ನು ಬೆನ್ನಟ್ಟಿದ್ದ ರಾಜಸ್ಥಾನ್ ರಾಯಲ್ಸ್ ತಂಡ ಒಂದು ವಿಕೆಟ್ ನಷ್ಟಕ್ಕೆ 3.2 ಓವರ್ ಗಳಲ್ಲಿ 41 ರನ್ ಗಳಿಸಿತ್ತು. 
ಪಂದ್ಯ ನಿರ್ಣಾಯಕ ಹಂತದಲ್ಲಿರುವಾಗ ಮತ್ತೆ ಮಳೆ ಪ್ರಾರಂಭವಾದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು. ಅಷ್ಟೇ ಅಲ್ಲದೇ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ಹಂಚಲಾಯಿತು. ಆರ್ ಸಿಬಿ ಪ್ಲೇ ಆಫ್ ಕನಸು ನನಸಾಗಬೇಕಿದ್ದರೆ ಈ ಪಂದ್ಯವನ್ನು ಗೆಲ್ಲಲೇಬೇಕಾಗಿತ್ತು. 13 ಪಂದ್ಯಗಳ ಪೈಕಿ 4 ರಲ್ಲಿ ಗೆದ್ದು ಒಂದರಲ್ಲಿ ಅಂಕಗಳನ್ನು ಹಂಚಿಕೊಂಡಿರುವ ಆರ್ ಸಿಬಿ 9 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ. ಇನ್ನುರಾಜಸ್ಥಾನ ರಾಯಲ್ಸ್ 11 ಅಂಕ ಗಳಿಸಿ 5 ನೇ ಸ್ಥಾನಕ್ಕೆ ಜಿಗಿದಿದ್ದು, ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT