ಎಂಎಸ್ ಧೋನಿ 
ಕ್ರಿಕೆಟ್

ಸಿಎಸ್‌ಕೆ ಅಭಿಮಾನಿಗಳಿಗೆ ಧನ್ಯವಾದ: 'ತಲಾ' ಬಿರುದು ನನಗೆ ಸಿಕ್ಕ ಅತಿದೊಡ್ಡ ಉಡುಗೊರೆ!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 80 ರನ್ ಗಳಿಂದ ಗೆದ್ದು ಬೀಗಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಚೆನ್ನೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 80 ರನ್ ಗಳಿಂದ ಗೆದ್ದು ಬೀಗಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮಧ್ಯೆ ತಂಡದ ನಾಯಕ ಎಂಎಸ್ ಧೋನಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. 
ಚೆನ್ನೈ ತಂಡವನ್ನು ಮುನ್ನಡೆಸುವಾಗ ನನಗೆ ಹೆಮ್ಮೆ ಅನಿಸುತ್ತದೆ. ಇಲ್ಲಿ ನನಗೆ ಅಪಾರ ಗೌರವ ಸಿಕ್ಕಿದೆ. ಅಲ್ಲದೆ ಇಲ್ಲಿನ ಅಭಿಮಾನಿಗಳು ನನಗೆ ತಲಾ(ಅಧಿನಾಯಕ) ಎಂದು ಬಿರುದು ನೀಡಿದ್ದು ನನಗೆ ಅದು ತುಂಬಾ ಸಂತೋಷ ನೀಡಿದೆ. ಅಲ್ಲದೆ ಕ್ರೀಡಾಂಗಣದಲ್ಲಿ ನಾನು ಆಡುವಾಗ ಅಭಿಮಾನಿಗಳು ತಲಾ ಎಂದು ಕರೆಯುತ್ತಾರೆ. ಇನ್ನು ಟಿವಿ ಮೂಲಕ ಪ್ರಪಂಚದ ಕೋಟ್ಯಾಂತರ ಜನ ಐಪಿಎಲ್ ಪಂದ್ಯಗಳನ್ನು ವೀಕ್ಷಿಸುತ್ತಾರೆ. ಅದು ನನಗೆ ಸಿಕ್ಕ ಗೌರವ ಎಂದು ಹೇಳಿದ್ದಾರೆ.
ತಮಿಳುನಾಡಿನಾದ್ಯಂತ ನನ್ನ ಹೆಸರಿನಿಂದ ಕರೆಯುವುದಿಲ್ಲ. ಬದಲಿಗೆ ತಲಾ ಎಂದು ಕರೆಯುತ್ತಾರೆ. ಇದೇ ನನಗೆ ದೊಡ್ಡ ಉಡುಗೊರೆ. ಅವರ ಅಭಿಮಾನಕ್ಕೆ ನಾನು ಚಿರಋಣಿ ಎಂದು ಹೇಳಿದ್ದಾರೆ.
ಅಗ್ರಸ್ಥಾನಕ್ಕಾಗಿ ನಿನ್ನೆ ಡೆಲ್ಲಿ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 80 ರನ್ ಗಳಿಂದ ಗೆಲುವು ಸಾಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT