ಧೋನಿ-ರಿಷಬ್ ಪಂತ್ 
ಕ್ರಿಕೆಟ್

ವಿಶ್ವಕಪ್ ಮಹಾಸಮರ: ಟೀಂ ಇಂಡಿಯಾದಲ್ಲಿ ರಿಷಬ್ ಪಂತ್‌ ಇರಬೇಕಿತ್ತು: ಅಜರುದ್ದೀನ್‌

ವಿಶ್ವಕಪ್ ಮಹಾಸಮರಕ್ಕಾಗಿ ಟೀಂ ಇಂಡಿಯಾ ತಂಡ ಅದಾಗಲೇ ಇಂಗ್ಲೆಂಡ್ ನಲ್ಲಿ ಸಮರಭ್ಯಾಸದಲ್ಲಿ ತೊಡಗಿದ್ದರೆ ಇತ್ತ ಟೀಂ ಇಂಡಿಯಾದ ಮಾಜಿ ಆಟಗಾರರು ಯುವ ಕ್ರಿಕೆಟಿಗ ರಿಷಬ್ ಪಂತ್ ಜಪ ಮಾಡುತ್ತಿದ್ದಾರೆ.

ನವದೆಹಲಿ: ವಿಶ್ವಕಪ್ ಮಹಾಸಮರಕ್ಕಾಗಿ ಟೀಂ ಇಂಡಿಯಾ ತಂಡ ಅದಾಗಲೇ ಇಂಗ್ಲೆಂಡ್ ನಲ್ಲಿ ಸಮರಭ್ಯಾಸದಲ್ಲಿ ತೊಡಗಿದ್ದರೆ ಇತ್ತ ಟೀಂ ಇಂಡಿಯಾದ ಮಾಜಿ ಆಟಗಾರರು ಯುವ ಕ್ರಿಕೆಟಿಗ ರಿಷಬ್ ಪಂತ್ ಜಪ ಮಾಡುತ್ತಿದ್ದಾರೆ.
ಇಂಗ್ಲೆಂಡ್‌ ಹಾಗೂ ವೇಲ್ಸ್‌ ಆತಿಥ್ಯದಲ್ಲಿ ಮೇ 30 ರಿಂದ ಆರಂಭವಾಗುವ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸುವ 15 ಆಟಗಾರರ ಭಾರತ ತಂಡದಲ್ಲಿ ಯುವ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಅವರು ಇರಬೇಕಿತ್ತು ಎಂದು ಭಾರತ ತಂಡದ ಮಾಜಿ ನಾಯಕ ಮೊಹಮ್ಮದ್‌ ಅಜರುದ್ದೀನ್‌ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿ ಮಾಧ್ಯವೊಂದರ ಸಂದರ್ಶನದಲ್ಲಿ ಮಾತನಾಡಿದ ಅಜರುದ್ದೀನ್, '2019ರ ಭಾರತ ವಿಶ್ವಕಪ್ ತಂಡ ನಿಜಕ್ಕೂ ಅದ್ಭುತವಾಗಿದ್ದು, ಸಮತೋಲನವಾಗಿದೆ. ಆದರೆ ತಂಡದಲ್ಲಿ ಸ್ಫೋಟಕ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ತಂಡ ಮಿಸ್ ಮಾಡಿಕೊಂಡಿದೆ ಎನ್ನುವುದು ನನ್ನನಿಸಿಕೆ' ಎಂದರು.
ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಯಾವುದು ಎಂಬ ಪ್ರಶ್ನೆಗೆ ಉತ್ತರಿಸಿದ ಅಜರ್, ಒಂದೇ ತಂಡವನ್ನು ಆರಿಸುವ ಬದಲು ಭಾರತ, ಇಂಗ್ಲೆಂಡ್, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ ತಂಡಗಳನ್ನು ಹೆಸರಿಸಿದರು. ಈ ತಂಡಗಳು ಬಲಿಷ್ಠವಾಗಿವೆ. ನಾಲ್ಕೂ ತಂಡಗಳಿಗೂ ಟ್ರೋಫಿ ಗೆಲ್ಲುವ ಅವಕಾಶವಿದೆ' ಎಂದು ಅಭಿಪ್ರಾಯಪಟ್ಟರು.
ಭಾರತ ಮತ್ತು ಪಾಕಿಸ್ತಾನ ತಂಡಗಳ ಮುಖಾಮುಖಿಯಲ್ಲಿ ಯಾವ ತಂಡ ಜಯಿಸಲಿದೆ ಎಂಬ ಪ್ರಶ್ನೆಗೆ, ಭಾರತ ತಂಡ ಗೆಲ್ಲಲಿದೆ ಎಂದು ಅಝರ್ ಪ್ರತಿಕ್ರಿಯಿಸಿದ್ದಾರೆ. ಮೇ 30 ರಂದು ಆತಿಥೇಯ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಕಾದಾಡಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT