ಸಂಗ್ರಹ ಚಿತ್ರ 
ಕ್ರಿಕೆಟ್

ಕೊಹ್ಲಿಯನ್ನು ಆರಂಭದಲ್ಲೇ ಕಟ್ಟಿಹಾಕುವುದು ಒಳಿತು: ಟ್ರೆಂಟ್‌ ಬೌಲ್ಟ್‌

ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ವಿಶ್ವಕಪ್‌ ಟೂರ್ನಿಯ ಅತ್ಯಂತ ಪ್ರಮುಖ ಆಟಗಾರನಾಗಿದ್ದು, ಅವರನ್ನು ಆರಂಭದಲ್ಲೇ ಕಟ್ಟಿಹಾಕಬೇಕು. ಇಲ್ಲವಾದಲ್ಲಿ ಅವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ನ್ಯೂಜಿಲೆಂಡ್‌ ತಂಡದ ಹಿರಿಯ ವೇಗಿ ಟ್ರೆಂಟ್‌ ಬೌಲ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ವಿಶ್ವಕಪ್‌ ಟೂರ್ನಿಯ ಅತ್ಯಂತ ಪ್ರಮುಖ ಆಟಗಾರನಾಗಿದ್ದು, ಅವರನ್ನು ಆರಂಭದಲ್ಲೇ ಕಟ್ಟಿಹಾಕಬೇಕು. ಇಲ್ಲವಾದಲ್ಲಿ ಅವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ನ್ಯೂಜಿಲೆಂಡ್‌ ತಂಡದ ಹಿರಿಯ ವೇಗಿ ಟ್ರೆಂಟ್‌ ಬೌಲ್ಟ್  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಐಸಿಸಿ ವಿಶ್ವಕಪ್‌ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್‌, ಭಾರತದ ವಿರುದ್ಧ 6 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಟ್ರೆಂಟ್‌ ಬೌಲ್ಟ್‌ ಮಾರಕ ದಾಳಿ ನಡೆಸಿ ನಾಲ್ಕು ವಿಕೆಟ್‌ ಪಡೆದಿದ್ದು, ಭಾರತ ಕೇವಲ 179 ರನ್‌ಗಳಗೆ ಆಲ್‌ಔಟ್‌ ಆಗಿತ್ತು.

ಈ ಬಗ್ಗೆ ಸುದ್ದಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಬೌಲ್ಟ್‌," ವಿರಾಟ್‌ ಕೊಹ್ಲಿ ಎದುರು ಆಕ್ರಮಣಕಾರಿ ಬೌಲಿಂಗ್‌ ಮಾಡುವುದು ಅನಿವಾರ್ಯ. ಇಲ್ಲವಾದಲ್ಲಿ ನೀವು ಮಾಡಿದ ಒಂದು ತಪ್ಪಿನಿಂದ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಟೀಂ ಇಂಡಿಯಾ ನಾಯಕನ ವಿಕೆಟ್‌ ಅನ್ನು ಬಹುಬೇಗ ಉರುಳಿಸಬೇಕು. ಇದು ಸಾಧ್ಯವಾಗದಿದ್ದಲ್ಲಿ ಅವರೊಬ್ಬರೇ ತಂಡದ ಫಲಿತಾಂಶವನ್ನು ಬದಲಾಯಿಸಲಿದ್ದಾರೆ" ಎಂದರು.

ಈ ಬಾರಿಯ ವಿಶ್ವಕಪ್‌ ಟೂರ್ನಿಯಲ್ಲಿ ವಿರಾಟ್‌ ಜತೆಗೆ, ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್‌, ಡೇವಿಡ್‌ ವಾರ್ನರ್‌ ಹಾಗೂ ಇಂಗ್ಲೆಂಡ್‌ ತಂಡದ ಜೋ ರೂಟ್‌  ಕೂಡ ಪ್ರಮುಖ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. ಅವರ ಬಗ್ಗೆ ಹೆಚ್ಚು ಏನೂ ಹೇಳದ ಬೌಲ್ಟ್‌, ಅವರ ಎದುರು ಬೌಲಿಂಗ್ ಮಾಡುವ ಅವಕಾಶ ಸಿಕ್ಕಾಗ ಅದನ್ನು ಪರಿಪೂರ್ಣವಾಗಿ ನಿರ್ವಹಿಸುತ್ತೇನೆ ಎಂದು ಬೌಲ್ಟ್‌ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT