ಬಂಧಿತ ಆಟಗಾರರು 
ಕ್ರಿಕೆಟ್

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಬಳ್ಳಾರಿ ತಂಡದ ಇಬ್ಬರು ಆಟಗಾರರ ಬಂಧನ

ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

2019ರ ಕೆಪಿಎಲ್ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂಬ ಆರೋಪವಿದೆ. ಈ ಹಿನ್ನೆಲೆ ತನಿಖೆ ತೀವ್ರಗೊಳಿಸಿದ ಸಿಸಿಬಿ ಪೊಲೀಸರ ಬಲೆಗೆ ಬಳ್ಳಾರಿ ಟಸ್ಕರ್ಸ್ ತಂಡದ ಇಬ್ಬರು ಆಟಗಾರರು ಸಿಕ್ಕಿಬಿದ್ದಿದ್ದಾರೆ. 

Sಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರರ್ ಖಾಜಿ ಬಂಧನಕ್ಕೊಳಗಾದ ಆಟಗಾರರು. ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡುವುದಾಗಿ ಆಟಗಾರರು 20 ಲಕ್ಷ ರೂ. ಹಣ ಪಡೆದಿದ್ದರು. ಬುಕ್ಕಿಗಳ ಬಳಿ ಹಣ ಪಡೆದು ಇಬ್ಬರು ಆಟಗಾರರು ನಿಧಾನಗತಿಯ ಬ್ಯಾಟಿಂಗ್ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಸಿಎಂ ಗೌತಮ್ ಅವರು ಕರ್ನಾಟಕದ ಪರವಾಗಿ ರಣಜಿ ಪಂದ್ಯಗಳಲ್ಲಿ, ಐಪಿಎಲ್‌ನಲ್ಲಿ ಮುಂಬೈ, ಆರ್‌ಸಿಬಿ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ಪರ ಆಟವಾಡಿದ್ದರು. ಇತ್ತ ಅಬ್ರರ್ ಖಾಜಿ ಕೂಡ ಕರ್ನಾಟಕ ತಂಡದ ರಣಜಿ ಆಟಗಾರರಾಗಿದ್ದಾರೆ. ಸದ್ಯ ಇಬ್ಬರು ಆಟಗಾರರನ್ನು ಬಂಧಿಸಿದ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಆಗಸ್ಟ್ 31ರಂದು ಮೈಸೂರಿನಲ್ಲಿ ಬಳ್ಳಾರಿ ಟಸ್ಕರ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ನಡುವೆ ಕೆಪಿಎಲ್ ಫೈನಲ್ ಪಂದ್ಯ ನಡೆದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT