ಸಂಗ್ರಹ ಚಿತ್ರ 
ಕ್ರಿಕೆಟ್

ಟಿ-20 ವಿಶ್ವಕಪ್ ಗೆಲ್ಲುವ ಅವಕಾಶ ಭಾರತಕ್ಕಿದೆ- ಅಖ್ತರ್ 

ಮುಂದಿನ ವರ್ಷದ ಟಿ-20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಅತ್ಯುತ್ತಮ ಅವಕಾಶವಿದೆ ಎಂದು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್, ಭವಿಷ್ಯ ನುಡಿದಿದ್ದಾರೆ.

ಲಾಹೋರ್: ಮುಂದಿನ ವರ್ಷದ ಟಿ-20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಅತ್ಯುತ್ತಮ ಅವಕಾಶವಿದೆ ಎಂದು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್, ಭವಿಷ್ಯ ನುಡಿದಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಟಿ-20 ಸರಣಿ ಜಯದ ಬಳಿಕ ಪ್ರತಿಕ್ರಿಯಿಸಿರುವ ಅವರು, "ಮೊದಲನೇ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದರೂ ನಂತರದ ಪಂದ್ಯಗಳಲ್ಲಿ ಗೆದ್ದು ಸರಣಿಯನ್ನು ತನ್ನದಾಗಿಸಿಕೊಂಡಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ನಾಯಕ ರೋಹಿತ್ ಶರ್ಮಾ ಅವರಿಗೂ ಸಲ್ಲುತ್ತದೆ." ಎಂದು ಹೇಳಿದ್ದಾರೆ. 

ಬಾಂಗ್ಲಾದೇಶ ಸಾಮಾನ್ಯ ತಂಡವೇನಲ್ಲಾ, ಪಂದ್ಯ ಸೋತ ಮಾತ್ರಕ್ಕೆ ಮುಜುಗರಪಡಬೇಕಾಗಿಲ್ಲ. ಉತ್ತಮವಾಗಿ ಸ್ಪರ್ಧಿಸಿದೆ. ಭಾರತ ಅದಕ್ಕಿಂತಲೂ ಹೆಚ್ಚಿನ ರೀತಿಯಲ್ಲಿ ಆಟ ಪ್ರದರ್ಶಿಸಿದ್ದು, ಬಾಂಗ್ಲಾದೇಶಕ್ಕೆ ಹ್ಯಾಟ್ಸ್ ಆಪ್ ಎಂದಿದ್ದಾರೆ. 

ನವದೆಹಲಿಯಲ್ಲಿ ನಡೆದಿದ್ದ  ಬಾಂಗ್ಲಾದೇಶ ವಿರುದ್ಧದ  ಮೊದಲನೇ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿತ್ತು. ಇದರೊಂದಿಗೆ 1-0 ಅಂತರದಲ್ಲಿ ಸರಣಿಯನ್ನು ಆರಂಭಿಸಿತ್ತು. ಬಳಿಕ, ಎಚ್ಚೆತ್ತುಕೊಂಡ ಭಾರತ ಎರಡು ಹಾಗೂ ಮೂರನೇ ಪಂದ್ಯಗಳಲ್ಲಿ ಗೆದ್ದು ಚುಟುಕು ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?