ಇಂದೋರ್ ಟೆಸ್ಟ್: ಎರಡನೇ ದ್ವಿಶತಕ ಸಿಡಿಸಿದ ಕನ್ನಡಿಗೆ ಮಯಾಂಕ್, ಬೃಹತ್ ಮೊತ್ತದತ್ತ ಟಿಂ ಇಂಡಿಯಾ 
ಕ್ರಿಕೆಟ್

ಇಂದೋರ್ ಟೆಸ್ಟ್: ಎರಡನೇ ದ್ವಿಶತಕ ಸಿಡಿಸಿದ ಕನ್ನಡಿಗ ಮಯಾಂಕ್, ಬೃಹತ್ ಮೊತ್ತದತ್ತ ಟಿಂ ಇಂಡಿಯಾ

ಕರ್ನಾಟಕದ ಮಯಾಂಕ್ ಅಗರ್ವಾಲ್ ಅವರು ಇಲ್ಲಿನ ಹೋಳ್ಕರ್ ಕ್ರಿಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲನೇ ಟೆಸ್ಟ್‌ ಪಂದ್ಯದ ಎರಡನೇ ದಿನ ವೃತ್ತಿ ಜೀವನದ ಎರಡನೇ ದ್ವಿಶತಕ ಪೂರೈಸಿದರು.

ಇಂದೋರ್: ಕರ್ನಾಟಕದ ಮಯಾಂಕ್ ಅಗರ್ವಾಲ್ ಅವರು ಇಲ್ಲಿನ ಹೋಳ್ಕರ್ ಕ್ರಿಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲನೇ ಟೆಸ್ಟ್‌ ಪಂದ್ಯದ ಎರಡನೇ ದಿನ ವೃತ್ತಿ ಜೀವನದ ಎರಡನೇ ದ್ವಿಶತಕ ಪೂರೈಸಿದರು. ಇದಕ್ಕೂ ಮುನ್ನ ಅವರು ವಿಶಾಖಪಟ್ಟಣಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲನೇ ದ್ವಿಶತಕ ಸಿಡಿಸಿದ್ದರು. ಅಲ್ಲದೇ, ಅವರು ರೋಹಿತ್ ಶರ್ಮಾ ಜತೆ ಮುರಿಯದ ಮೊದಲನೇ ವಿಕೆಟ್‌ಗೆ 317 ರನ್ ಗಳಿಸಿದ್ದರು.

ಅದ್ಭುತ ಲಯದಲ್ಲಿರುವ ಮಯಾಂಕ್ ಅಗರ್ವಾಲ್ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಸ್ಥಿರ ಪ್ರದರ್ಶನ ತೋರುವಲ್ಲಿ ಸಫಲರಾಗಿದ್ದಾಾರೆ. 28ರ ಪ್ರಾಯದ ಅಗರ್ವಾಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳಿಂದ 340 ರನ್ ದಾಖಲಿಸಿದ್ದರು.

ಅಗರ್ವಾಲ್ ಈ ಇನಿಂಗ್ಸ್‌‌ನಲ್ಲಿ 330 ಎಸೆತಗಳಲ್ಲಿ 243 ರನ್ ಗಳಿಸಿ ಔಟ್ ಆದರು. ಇವರ ಅದ್ಭುತ ಇನಿಂಗ್ಸ್‌ ನಲ್ಲಿ ಎಂಟು ಸಿಕ್ಸರ್ ಹಾಗೂ 28 ಬೌಂಡರಿಗಳು ಇದ್ದವು. ದ್ವಿಶತಕದ ಜತೆಗೆ, ಮಯಾಂಕ್ ಮತ್ತೊೊಂದು ಮೈಲುಗಲ್ಲು ಸೃಷ್ಠಿಸಿದರು. ಬಾಂಗ್ಲಾದೇಶ ವಿರುದ್ಧ ಒಂದೇ ಇನಿಂಗ್ಸ್‌‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌‌ಮನ್ ಎನಿಸಿಕೊಂಡರು. 2004/05ರಲ್ಲಿ ಢಾಕಾದಲ್ಲಿ 248 ರನ್ ಗಳಿಸಿದ್ದ ಸಚಿನ್ ತೆಂಡೂಲ್ಕರ್ ಅಗ್ರ ಸ್ಥಾನದಲ್ಲಿದ್ದಾರೆ.

ಇತ್ತೀಚಿನ ವರದಿ ಬಂದಾಗ ಟೀಂ ಇಂಡಿಯಾ ಆರು ವಿಕೆಟ್ ನಷ್ಟಕ್ಕೆ 493 ರನ್ ಗಳಿಸಿದೆ. ರವೀಂದ್ರ ಜಡೇಜಾ, ಉಮೇಶ್ ಯಾದವ್ ಕಣದಲ್ಲಿದ್ದು ಕ್ರಮವಾಗಿ 60 ಮತ್ತು 25 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT