ಸಾಂದರ್ಭಿಕ ಚಿತ್ರ 
ಕ್ರಿಕೆಟ್

ವಿಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ಟಿ20 ಗೆ ಮೊಹಮ್ಮದ್ ಶಮಿ ಕಂಬ್ಯಾಕ್ 

ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಡಿಸೆಂಬರ್‌ನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಕ್ರಿಕೆಟ್‌ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.ಎಂಎಸ್ ಕೆ ಪ್ರಸಾದ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿ ಈ ತಂಡವನ್ನು ಪ್ರಕಟಿಸಿದ್ದು, ವಿರಾಟ್‌ ಕೊಹ್ಲಿ ತಂಡಗಳನ್ನು ಮುನ್ನಡೆಸಲಿದ್ದಾರೆ.

ಮುಂಬೈ: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಡಿಸೆಂಬರ್‌ನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಕ್ರಿಕೆಟ್‌ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.ಎಂಎಸ್ ಕೆ ಪ್ರಸಾದ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿ ಈ ತಂಡವನ್ನು ಪ್ರಕಟಿಸಿದ್ದು, 
ವಿರಾಟ್‌ ಕೊಹ್ಲಿ ತಂಡಗಳನ್ನು ಮುನ್ನಡೆಸಲಿದ್ದಾರೆ. 

ಬಾಂಗ್ಲಾ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಗೆ ವಿಶ್ರಾಂತಿ ಪಡೆದಿದ್ದ ವಿರಾಟ್‌ ಕೊಹ್ಲಿ, ಇದೀಗ ಏಕದಿನ ಮತ್ತು ಟಿ20 ತಂಡಕ್ಕೆ ಮರಳಿ ಸೇರಿಕೊಂಡಿದ್ದು ನಾಯಕನ ಜವಾಬ್ದಾರಿ ನಿಭಾಯಿಸಲಿದ್ದು, ರೋಹಿತ್‌ ಶರ್ಮಾ ಉಪನಾಯಕನಾಗಿ ಮುಂದುವರಿಯಲಿದ್ದಾರೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಚೇತರಿಸಿರುವ ಅನುಭವಿ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌ ಹಾಗೂ ವೇಗಿ ಮೊಹಮ್ಮದ್ ಶಮಿ ಟಿ20 ಕ್ರಿಕೆಟ್‌ ತಂಡಕ್ಕೆ ಮರಳಿದ್ದಾರೆ.

ಡಿಸೆಂಬರ್‌ 6ರಂದು ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿ ಆರಂಭವಾಗಲಿದ್ದು, ಮೊದಲಿಗೆ ಟಿ20 ಕ್ರಿಕೆಟ್‌ ಸರಣಿಯಲ್ಲಿ ಇತ್ತಂಡಗಳು ಪೈಪೋಟಿ ನಡೆಸಲಿವೆ. ಪ್ರಥಮ ಪಂದ್ಯ ಡಿ.6ರಂದು ಮುಂಬೈನಲ್ಲಿ, 2ನೇ ಪಂದ್ಯ ಡಿ8. ತಿರುವನಂತಪುರದಲ್ಲಿ ಮತ್ತು 3ನೇ ಪಂದ್ಯ ಡಿ.11ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

ಡಿಸೆಂಬರ್ 15 ರಂದು ಭಾನುವಾರ ಚೆನ್ನೈಯಲ್ಲಿ ಮಧ್ಯಾಹ್ನ 2ಕ್ಕೆ ಪ್ರಥಮ ಏಕದಿನ, ಡಿಸೆಂಬರ್ 18 ರಂದು ವಿಶಾಖಪಟ್ಟಣಂನಲ್ಲಿ ಮಧ್ಯಾಹ್ನ 2ಕ್ಕೆ ದ್ವೀತಿಯ ಏಕದಿನ ಹಾಗೂ ಡಿಸೆಂಬರ್ 22 ರಂದು ಕಟಕ್ ನಲ್ಲಿ ಮಧ್ಯಾಹ್ನ 2ಕ್ಕೆ ಮೂರನೇ  ಹಾಗೂ ಅಂತಿಮ ಏಕದಿನ ಪಂದ್ಯ ನಡೆಯಲಿದೆ. 

ಏಕದಿನ ತಂಡ ಇಂತಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ರಿಷಭ್ ಪಂತ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ಕೇದಾರ್ ಜಾದವ್, ರವೀಂದ್ರ ಜಡೇಜಾ, ಶಿವಂ ದುಬೆ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ದೀಪಕ್ ಚಾಹರ್ ಮತ್ತು ಭುವನೇಶ್ವರ್ ಕುಮಾರ್ 

ಟಿ-20 ತಂಡ ಇಂತಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ರಿಷಭ್ ಪಂತ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ಶಿವಂದುಬೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT