ಸಂಗ್ರಹ ಚಿತ್ರ 
ಕ್ರಿಕೆಟ್

ನನ್ನಿಂದಲೇ ಗಂಭೀರ ಕ್ರಿಕೆಟ್ ವೃತ್ತಿ ಜೀವನ ಅಂತ್ಯವಾಯಿತು: ಪಾಕ್ ಕ್ರಿಕೆಟಿಗ ಮಹಮದ್ ಇರ್ಫಾನ್

ಇತ್ತೀಚೆಗಷ್ಟೇ ಕ್ರಿಕೆಟ್ ನಿಂದ ನಿವೃತ್ತಿ ಪಡೆದು ರಾಜಕೀಯದತ್ತ ಹೊರಳಿರುವ ಭಾರತದ ಕ್ರಿಕೆಟಿಗ ಗೌತಮ್ ಗಂಭೀರ್ ಕ್ರಿಕೆಟ್ ವೃತ್ತಿ ಜೀವನ ಅಂತ್ಯವಾಗಲು ನಾನೇ ಕಾರಣ ಎಂದು ಪಾಕಿಸ್ತಾನದ ವೇಗಿ ಮಹಮದ್ ಇರ್ಫಾನ್ ಹೇಳಿದ್ದಾರೆ.

ಕರಾಚಿ: ಇತ್ತೀಚೆಗಷ್ಟೇ ಕ್ರಿಕೆಟ್ ನಿಂದ ನಿವೃತ್ತಿ ಪಡೆದು ರಾಜಕೀಯದತ್ತ ಹೊರಳಿರುವ ಭಾರತದ ಕ್ರಿಕೆಟಿಗ ಗೌತಮ್ ಗಂಭೀರ್ ಕ್ರಿಕೆಟ್ ವೃತ್ತಿ ಜೀವನ ಅಂತ್ಯವಾಗಲು ನಾನೇ ಕಾರಣ ಎಂದು ಪಾಕಿಸ್ತಾನದ ವೇಗಿ ಮಹಮದ್ ಇರ್ಫಾನ್ ಹೇಳಿದ್ದಾರೆ.

ಈ ಹಿಂದಿನ ಭಾರತದ ವಿರುದ್ಧದ ಪಂದ್ಯದಲ್ಲಿ ಗಂಭೀರ್ ರನ್ನು ನಾನು ನಾಲ್ಕು ಬಾರಿ ಔಟ್ ಮಾಡಿದ್ದೆ. ಆ ಬಳಿಕದ ಟೂರ್ನಿಯಲ್ಲಿ ಗಂಭೀರ್ ಅವಕಾಶ ವಂಚಿತರಾಗಿ ಅವರ ಕ್ರಿಕೆಟ್ ಜೀವನವೇ ಅಂತ್ಯವಾಯಿತು ಎಂದು ಮಹಮದ್ ಇರ್ಫಾನ್ ಸುದ್ದಿಸಂಸ್ಥೆಯ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

'2012ರ ಸರಣಿ ಬಳಿಕ ಗೌತಮ್ ಗಂಭೀರ್ ತಮ್ಮ ಕಳಪೆ ಪ್ರದರ್ಶನದಿಂದಾಗಿ ತಂಡದಿಂದ ಹೊರ ಬಂದರು. ಅಂದು ನಡೆದ ಪಂದ್ಯಗಳಲ್ಲಿ (ಟಿ20 ಮತ್ತು ಏಕದಿನ) ನಾನು ಗಂಭೀರ್ ಅವರನ್ನು ನಾಲ್ಕು ಬಾರಿ ಔಟ್ ಮಾಡಿದ್ದೆ. ಇದಾದ ಬಳಿಕ ಗಂಭೀರ್ ಕೇವಲ ಒಂದು ಸರಣಿಯಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದರು ಎಂದು ಮೊಹಮ್ಮದ್ ಇರ್ಫಾನ್ ಹೇಳಿದ್ದಾರೆ.

ಇದೇ ವೇಳೆ ಗೌತಮ್ ಗಂಭೀರ್ ತಮ್ಮ ಎಸೆತಗಳನ್ನು ಎದುರಿಸಲೂ ಕೂಡ ಕಷ್ಟ ಪಡುತ್ತಿದ್ದರು ಎಂದು ಹೇಳಿರುವ ಇರ್ಫಾನ್, ಗಂಭೀರ್ ಪಂದ್ಯದ ವೇಳೆ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಲೂ ಕೂಡ ಹೆದರುತ್ತಿದ್ದರು. ನಾನು ಎಸೆಯುತ್ತಿದ್ದ ಎಸೆತಗಳನ್ನು ಅರ್ಥ ಮಾಡಿಕೊಳ್ಳಲು ಗಂಭೀರ್ ಪರದಾಡುತ್ತಿದ್ದರು. ಪ್ರತಿಬಾರಿ ನನ್ನ ಎಸೆತಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರು.  ಗಂಭೀರ್ ಮಾಡುತ್ತಿದ್ದರು ಎಂದು ಇರ್ಫಾನ್ ಹೇಳಿದ್ದಾರೆ.

ಮಹಮದ್ ಇರ್ಫಾನ್ ಹೇಳಿಕೆ ಕ್ರಿಕೆಟ್ ವಲ.ದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಇರ್ಫಾನ್ ಹೇಳಿಕೆಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT