ಕ್ರಿಕೆಟ್

ಸಿಕ್ಕ ಅವಕಾಶವನ್ನು ಯಶಸ್ವಿಯಾಗಿ ಬಳಸಿಕೊಂಡ ಖುಷಿ ಇದೆ: ಉಮೇಶ್ ಯಾದವ್

Vishwanath S

ಪುಣೆ: ಟೀಂ ಇಂಡಿಯಾ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಇಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 137 ರನ್ ಗಳಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಅಲ್ಲದೆ ಮೂರು ಪಂದ್ಯಗಳ ಸರಣಿಯನ್ನು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ವಶಕ್ಕೆ ಪಡೆದುಕೊಂಡಿದೆ. ಮೊದಲ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ತಲಾ ಮೂರು ವಿಕೆಟ್ ಪಡೆದಿರುವ ಉಮೇಶ್ ಅಬ್ಬರಿಸಿದ್ದಾರೆ. 

SCROLL FOR NEXT