ಬಿಸಿಸಿಐ ಕಚೇರಿ ಬಳಿ ಸೌರವ್ ಗಂಗೂಲಿ 
ಕ್ರಿಕೆಟ್

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಸೌರವ್ ಗಂಗೂಲಿ, ದಾದಾ ಅವಿರೋಧ ಆಯ್ಕೆ ಬಹುತೇಕ ಖಚಿತ

ಒಂದು ಕಾಲದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಆಳಿದ್ದ ದಾದಾ ಖ್ಯಾತಿಯ ಸೌರವ್ ಗಂಗೂಲಿ ಅವರು ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ದಾದಾ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಮುಂಬೈ: ಒಂದು ಕಾಲದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಆಳಿದ್ದ ದಾದಾ ಖ್ಯಾತಿಯ ಸೌರವ್ ಗಂಗೂಲಿ ಅವರು ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ದಾದಾ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಬಿಸಿಸಿಐ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

ಬಂಗಾಳ ಕ್ರಿಕೆಟ್ ಅಸೋಸಿಯೇಷನ್  ಮುಖ್ಯಸ್ಥರಾಗಿರುವ ಸೌರವ್ ಗಂಗೂಲಿ ಹಾಗೂ ಮತ್ತಿತರ ಅಭ್ಯರ್ಥಿಗಳು ಇಂದ ಬೆಳಗ್ಗೆ ಔಪಚಾರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಬಿಸಿಸಿಐ ನೂತನ ಅಧ್ಯಕ್ಷರಾಗಲು ಸಿದ್ಧತೆ ನಡೆಸಿದ್ದಾರೆ.

ಗಂಗೂಲಿ ಅವರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಹೋದರ ಅರುಣ್ ಧುಮಾಲ್ ಅವರು ಖಜಾಂಚಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚುನಾವಣೆಗೆ ಸಂಬಂಧಪಟ್ಟಂತೆ ಮುಂಬಯಿಯಲ್ಲಿ ನಡೆದ ಹಲವು ಸುತ್ತುಗಳ ಮಾತುಕತೆಗಳ ಬಳಿಕ ಭಾರತ ಕ್ರಿಕೆಟ್ ತಂಡದ ಮಾಜಿ ಯಶಸ್ವಿ ನಾಯಕ ಸೌರವ್ ಗಂಗೂಲಿ ಮುಂದಿನ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ನೇಮಿತಿ ಆಡಳಿತಾತ್ಮಕ ಸಮಿತಿ ಅಕ್ಟೋಬರ್ 23ರಂದು ಬಿಸಿಸಿಐ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದು, ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಹಾಗೂ ಕರ್ನಾಟಕದ ಬ್ರಿಜೇಶ್ ಪಟೇಲ್ ಐಪಿಎಲ್ ಮುಖ್ಯಸ್ಥರಾಗಿ ಆಯ್ಕೆಯಾಗುವುದು ಖಚಿತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT