ಬಿಸಿಸಿಐ ಕಚೇರಿ ಬಳಿ ಸೌರವ್ ಗಂಗೂಲಿ 
ಕ್ರಿಕೆಟ್

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಸೌರವ್ ಗಂಗೂಲಿ, ದಾದಾ ಅವಿರೋಧ ಆಯ್ಕೆ ಬಹುತೇಕ ಖಚಿತ

ಒಂದು ಕಾಲದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಆಳಿದ್ದ ದಾದಾ ಖ್ಯಾತಿಯ ಸೌರವ್ ಗಂಗೂಲಿ ಅವರು ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ದಾದಾ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಮುಂಬೈ: ಒಂದು ಕಾಲದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಆಳಿದ್ದ ದಾದಾ ಖ್ಯಾತಿಯ ಸೌರವ್ ಗಂಗೂಲಿ ಅವರು ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ದಾದಾ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಬಿಸಿಸಿಐ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

ಬಂಗಾಳ ಕ್ರಿಕೆಟ್ ಅಸೋಸಿಯೇಷನ್  ಮುಖ್ಯಸ್ಥರಾಗಿರುವ ಸೌರವ್ ಗಂಗೂಲಿ ಹಾಗೂ ಮತ್ತಿತರ ಅಭ್ಯರ್ಥಿಗಳು ಇಂದ ಬೆಳಗ್ಗೆ ಔಪಚಾರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಬಿಸಿಸಿಐ ನೂತನ ಅಧ್ಯಕ್ಷರಾಗಲು ಸಿದ್ಧತೆ ನಡೆಸಿದ್ದಾರೆ.

ಗಂಗೂಲಿ ಅವರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಹೋದರ ಅರುಣ್ ಧುಮಾಲ್ ಅವರು ಖಜಾಂಚಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚುನಾವಣೆಗೆ ಸಂಬಂಧಪಟ್ಟಂತೆ ಮುಂಬಯಿಯಲ್ಲಿ ನಡೆದ ಹಲವು ಸುತ್ತುಗಳ ಮಾತುಕತೆಗಳ ಬಳಿಕ ಭಾರತ ಕ್ರಿಕೆಟ್ ತಂಡದ ಮಾಜಿ ಯಶಸ್ವಿ ನಾಯಕ ಸೌರವ್ ಗಂಗೂಲಿ ಮುಂದಿನ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ನೇಮಿತಿ ಆಡಳಿತಾತ್ಮಕ ಸಮಿತಿ ಅಕ್ಟೋಬರ್ 23ರಂದು ಬಿಸಿಸಿಐ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದು, ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಹಾಗೂ ಕರ್ನಾಟಕದ ಬ್ರಿಜೇಶ್ ಪಟೇಲ್ ಐಪಿಎಲ್ ಮುಖ್ಯಸ್ಥರಾಗಿ ಆಯ್ಕೆಯಾಗುವುದು ಖಚಿತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!